ಹಿರಿಯೂರು ಮಾ.13
ಬೈಕ್ ಹಾಗೂ ಕಸ ಸಂಗ್ರಹಣೆ ವಾಹನ ನಡುವೆ ಅಪಘಾತ ಯುವಕ ಸಾವು.
ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಸಮೀಪ ಈ ದುರಂತ ಸಂಭವಿಸಿದ್ದು ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಂತ ಚಿದಾನಂದ(23) ಎಂಬ ವಿದ್ಯಾರ್ಥಿ ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ವಿದ್ಯಾರ್ಥಿ ಚಿದಾನಂದ್ ಮಂಗುಸವಳ್ಳಿ ಊರಿಗೆ ತೆರಳುತ್ತಿದ್ದ ಮಾರ್ಗಮಧ್ಯೆ ಪಲ್ಸರ್ ಬೈಕಿಗೆ ಹರಿಯಬ್ಬೆ ಗ್ರಾಮ ಪಂಚಾಯ್ತಿಗೆ ಸೇರಿದಂತ ಕಸದ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ ಚಿದಾನಂದ್ ಗೆ ಧರ್ಮಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇದೀಗ ಮಂಗುಸವಳ್ಳಿಯಲ್ಲಿಯ ಚಿದಾನಂದ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
About The Author
Discover more from JANADHWANI NEWS
Subscribe to get the latest posts sent to your email.