September 15, 2025
FB_IMG_1731507170127.jpg


ಚಿತ್ರದುರ್ಗ. ನ.13:
ನವೆಂಬರ್ 14 ರಿಂದ 20 ವರೆಗೆ ದೇಶದಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಚಿತ್ರದುರ್ಗ ಜಿಲ್ಲೆಯ ಏಳು ಸ್ಥಳಗಳಲ್ಲಿ, ಏಳು ದಿನ ಸಹಕಾರಿ ತತ್ವದ ವಿವಿಧ ಅಂಶಗಳ ಆಧಾರದಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎನ್ನುವ ಧ್ಯೇಯ ವಾಕ್ಯದೊಂದಿಗೆ ಈ ಬಾರಿಯ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ನ.14 ಗುರುವಾರ ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಕೆಳಗೋಟೆಯ, ಬಿ.ಎಲ್.ಗೌಡ ಲೇಔಟ್ ಅಲ್ಲಿರುವ ಸಹಕಾರ ಭವನದ ಆವರಣದಲ್ಲಿ ಸಹಕಾರ ಧ್ವಜಾರೋಹಣ ನೆರವೇರಿಸುವುದರ ಮೂಲಕ ಸಪ್ತಾಹ ಆಚರಣೆಗೆ ಚಾಲನೆ ನೀಡಲಾಗುವುದು.
ನವೆಂಬರ್ 15 ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ನಗರದ ‘ಶ್ರೀ ರಾಮ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ. “ಸಹಕಾರ ಸಂಸ್ಥೆಗಳಲ್ಲಿ ಅನ್ವೇಷಣೆ, ತಾಂತ್ರಿಕತೆ ಮತ್ತು ಉತ್ತಮ ಆಡಳಿತ” ಎನ್ನುವ ತತ್ವದೊಂದಿಗೆ ದಿನಾಚರಣೆಯನ್ನು ಆಚರಿಸಲಾಗುವುದು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಮಾರಂಭದ ಉದ್ಘಾಟಿಸುವರು. ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಹಕಾರ ಧ್ವಜಾರೋಹಣ ನೆರವೇರಿಸುವರು. ಕಲ್ಯಾಣ ಮಂಟಪದ ಆವರಣದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದ್ದು, ಸಂಸದ ಗೋವಿಂದ ಎಂ.ಕಾರಜೋಳ ವಸ್ತು ಪ್ರದರ್ಶನ ಮಳಿಗೆಗಳಿಗೆ ಚಾಲನೆ ನೀಡುವರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಪ್ರಕಟಿಸುವ ಸಹಕಾರ ವಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರು ಹಾಗೂ ಶಾಸಕ ಜಿ.ಟಿ.ದೇವೆಗೌಡ ಬಿಡುಗಡೆ ಮಾಡುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ॥ ಎಂ.ಚAದ್ರಪ್ಪ, ಚಿದಾನಂದ್ ಎಂ.ಗೌಡ, ವಿಧಾನ ಪರಿಷತ್, ಶಾಸಕ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ವೆಂಟರಾವ್ ನಾಡಗೌಡ ಭಾಗವಹಿಸುವರು. ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಸಲ್ಲಿಸಿರುವ 6 ಹಿರಿಯ ಸಹಕಾರಿಗಳಿಗೆ ಹಾಗೂ 6 ಸಹಕಾರಿ ಸಂಘಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಸಂಸ್ಥೆಗಳ ಅಧ್ಯಕ್ಷರುಗಳು ಹಾಗೂ ಗಣ್ಯರು ಮತ್ತು ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಉಪಸ್ಥಿತರಿರುವರು. ಜಿಲ್ಲೆಯ ಎಲ್ಲಾ ವಿಧವಾದ ಸಹಕಾರ ಸಂಘಗಳ ಪದಾಧಿಕಾರಿಗಳು ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ತಿಳಿಸಿದರು.
ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಪ್ತಾಹ ಆಚರಣೆ :
ಅಖಿಲ ಭಾರತ ಸಪ್ತಾಹದ ಅಂಗವಾಗಿ ನ.14 ರಂದು ಹೊಳಲ್ಕೆರೆ ಪಟ್ಟಣದ ಸ್ನೇಹ ಸಪ್ತಪದಿ ಕಲ್ಯಾಣ ಮಂಟಪದಲ್ಲಿ, ನ.16 ರಂದು ಹೊಸದುರ್ಗ ಪಟ್ಟಣದ ಜಯದೇವ ಕಲ್ಯಾಣ ಮಂಟಪ, ನ.17 ರಂದು ಚಳ್ಳಕೆರೆ ಕಂಬಳಿ ಮಾರುಕಟ್ಟೆ ಭವನ, ನ.18 ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಪಿಎಸಿಎಸ್ ಆವರಣ, ನ.19 ರಂದು ಹಿರಿಯೂರು ತಾಲ್ಲೂಕಿನ ಆರನಕಟ್ಟೆ ಪಿಎಸಿಎಸ್ ಆವರಣ ಹಾಗೂ ನ.20 ರಂದು ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಪಿಎಸಿಎಸ್ ಮತ್ತು ಎಂಪಿಸಿಎಸ್ ಆವರಣದಲ್ಲಿ ಸಪ್ತಾಹ ಆಚರಣೆ ಮಾಡಲಾಗುವುದು.
ಸಪ್ತಾಹದಲ್ಲಿ ಸಹಕಾರ ಚಳುವಳಿಯ ಸಾಧನೆ, ವೈಪಲ್ಯ ಹಾಗೂ ಮುಂದಿನ ಗುರಿಗಳ ಬಗ್ಗೆ ಚರ್ಚಿಸಲಾಗುವುದು. ಇದಕ್ಕಾಗಿ ಚರ್ಚೆ, ಸಮಾಲೋಚನೆ, ವಿಚಾರ ಸಂಕೀರಣಗಳನ್ನು ಆಯೋಜಿಸಲಾಗುವುದು. ಸಹಕಾರ ಕ್ಷೇತ್ರದ ಸಾಧನೆಯನ್ನು ತಿಳಿಸುವ ರೀತಿಯಲ್ಲಿ ಜನಸಾಮಾನ್ಯರಿಗೆ ಉಪಯುಕ್ತವಾಗುವ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಏರ್ಪಡಿಸುವುದಾಗಿ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ಹೇಳಿದರು.
ಸಹಕಾರಿ ವಿಷಯ ಪಠ್ಯವಾಗಿಲಿ:
ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚಿನ ಸಹಕಾರಿ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಸುಮಾರು 1.5 ಲಕ್ಷ ಜನರಿಗೆ ಸಹಕಾರಿ ಸಂಘಗಳ ಮೂಲಕ ಉದ್ಯೋಗ ದೊರಕಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತದಿಂದ ರಾಜ್ಯಾದ್ಯಂತ 8 ತರಬೇತಿ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ಪಿಯುಸಿ ಪೂರೈಹಿಸಿದ ವಿದ್ಯಾರ್ಥಿಗಳಿಗೆ ಸಹಕಾರಿ ಕ್ಷೇತ್ರದ ಕುರಿತು ತರಬೇತಿ ನೀಡಲಾಗುತ್ತಿದೆ. ಇಷ್ಟು ದೊಡ್ಡ ವ್ಯಾಪ್ತಿಯಲ್ಲಿ ಪಸರಿಸಿ, ರಾಜ್ಯದ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಹಕಾರಿ ಸಂಘಗಳ ಕುರಿತು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಪಠ್ಯದ ಮೂಲಕ ತಿಳಿಸಿಕೊಡುವ ಕಾರ್ಯ ಮಾಡಬೇಕು. ಪಿಯು ಹಾಗೂ ಪದವಿ ವಿದ್ಯಾರ್ಥಿಗಳಿ ಸಹಕಾರಿ ವಿಷಯವನ್ನು ಪಠ್ಯವಾಗಿಸಬೇಕು. ಸಮಾಜದಲ್ಲಿ ಡಾಕ್ಟರ್, ಇಂಜಿಯರ್‌ಗಳAತೆ ಸಹಕಾರಿ ವಿಷಯದ ಪರಿಣಿತರ ಅವಶ್ಯಕತೆ ಇದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಂಡಳಿಯ ನಿರ್ದೇಶಕ ರಾಮರೆಡ್ಡಿ ಸರ್ಕಾರವನ್ನು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ಇಲ್ಯಾಸ್ ಉಲ್ಲಾ ಷರೀಫ್, ಸಹಕಾರಿ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಬಾಹುಬಲಿ ಹಂಜೆ ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading