ದಾವಣಗೆರೆ,ಫೆಬ್ರವರಿ 14ಗ್ರಾಮ ಆಡಳಿತಾಧಿಕಾರಿಗಳು ಕೈಗೊಂಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಆಗುತ್ತಿರುವ ವಿಳಂಬ ತಪ್ಪಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ.ತಿಳಿಸಿದ್ದಾರೆ.
ವಿದ್ಯಾರ್ಥಿಗಳು ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಶ್ಯಕವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆ ಪಡೆಯಲು ವಿಳಂಬವಾಗುತ್ತಿದೆ ಎಂಬ ಆತಂಕ ಪರಿಹರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಸಹಾಯಕ್ಕೆ 08192-234034, ಟೋಲ್ ಫ್ರೀ 1077 ಸಂಖ್ಯೆಗೆ ಕರೆ ಮಾಡಬೇಕು.
ಆದರೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡಬಾರದೆಂದು ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.