December 14, 2025
IMG-20250314-WA0221.jpg

ಬೆಂಗಳೂರು ಮಾ.14

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರ್ಣ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೇಟಿ ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕ ಟಿ.ರಘುಮೂರ್ತಿ ಮಾತನಾಡಿ ನಮ್ಮ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಸಮರ್ಥವಾಗಿ ಪಕ್ಷ ಮುನ್ನಡೆಸುವ ಮೂಲಕ ಪಕ್ಷ ಅಧಿಕಾರಕ್ಕೆ ತರುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಐದು ವರ್ಷ ಪೂರ್ಣಗೊಳಿಸಿದ್ದು ಅವರಿಗೆ ಶುಭ ಹಾರೈಸಿ ಚಿತ್ರದುರ್ಗ ಜಿಲ್ಲೆಯ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಲು ಮನವಿ ಮಾಡಿದ್ದೇವೆ. ಜಿಲ್ಲೆಯ ಜನರಿಗೆ ಭದ್ರಾದಿಂದ ಆಗುವಂತಹ ಪ್ರಯೋಜನ ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಹಾಗೂ ತುಮಕೂರು ಶಾಖಾ – ಕಾಲುವೆಗಳ ಆರಂಭಿಕ ಸರಪಳಿಗಳಲ್ಲಿ ಉದ್ಭವಿಸಿರುವ ಭೂಸ್ವಾಧೀನ ಸಮಸ್ಯೆಯ ಕುರಿತು ಇಂದು ಸಭೆ ಸಹ ನಡೆಸಿ ಸೂಕ್ತ ಕ್ರಮಕ್ಕೆ ಡಿಸಿಎಂ ಅವರು ಸೂಚನೆ ‌ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಬಡ ಜನರ ಆರ್ಥಿಕತೆ ಸುಧಾರಣೆ ಮಾಡಿದ್ದು ನೆಮ್ಮದಿ ಬದುಕು ನಡೆಸಲು ಸಹಕಾರಿಯಾಗಿದೆ. ಯಾರು ಏನೇ ಹೇಳಿದರು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ.

ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಎಲ್ಲಾರೂ ಒಟ್ಟಾಗಿ ಶ್ರಮಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ , ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading