March 14, 2026
FB_IMG_1773494631337.jpg

ವರದಿ:
ಚಿತ್ರದುರ್ಗ ತಾಲೂಕು ತುರುವನೂರು ಹೋಬಳಿಯ ಚಿಕ್ಕಪ್ಪನಹಳ್ಳಿ ಗ್ರಾಮದಿಂದ ಚಿಕ್ಕಗೊಂಡನಹಳ್ಳಿ ಗ್ರಾಮದವರೆಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (PMGSY) ಅಡಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ರಸ್ತೆ ಕಾಮಗಾರಿಯನ್ನು ಇಂದು ಪರಿಶೀಲಿಸಲಾಯಿತು.

ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ಸಮಯಕ್ಕೆ ಪೂರ್ಣಗೊಳಿಸಲು ಅಗತ್ಯವಾದ ಸೂಚನೆಗಳು ಹಾಗೂ ಸೂಕ್ತ ಸಲಹೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಪಿ.ಎಂ.ಜಿ.ಎಸ್.ವೈ ಇಂಜಿನಿಯರ್ ನಾಗರಾಜ್, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading