ನಾಯಕನಹಟ್ಟಿ-: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಇಡೀ ವಿಶ್ವವೇ ಮೆಚ್ಚುವಂತ ಸಂವಿಧಾನವನ್ನು ರಚಿಸಿದ್ದಾರೆ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಜಿ ಪಾಂಡುರಂಗಪ್ಪ. ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ನಡೆದ 135ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು ಅಂಬೇಡ್ಕರ್ ತತ್ವ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಂಡು ಸಂವಿಧಾನಕ್ಕೆ ಗೌರವ ಕೊಡೋಣ ಎಂದು ಅಭಿಪ್ರಾಯಪಟ್ಟರು.
ಪ್ರೊಫೆಸನರಿ ಪಿಎಸ್ಐ ಡಿ.ಕೆ. ಗುರುರಾಜ್, ಎಎಸ್ಐ ದಾದಾಪೀರ್, ಸಿಬ್ಬಂದಿಗಳಾದ ಭಾಷಾ, ರಾಮಾಂಜನಿ,
ಶ್ರೀಹರಿ ,ತಿಮ್ಮೇಶ್, ಮಹಿಳಾಪೇದೆ ಸುನಿತಾ,
ಪಾಲ್ಗೊಂಡಿದ್ದರು.
About The Author
Discover more from JANADHWANI NEWS
Subscribe to get the latest posts sent to your email.