September 15, 2025
IMG-20250415-WA0191.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ಸರ್ವರಿಗೂ ಸಮಾನ ಅವಕಾಶಗಳು ಸಾಮಾಜಿಕ ನ್ಯಾಯದಡಿಯಲ್ಲಿ ದೊರಕುವಂತೆ ಮಾಡಿದ ಮಹಾನ್ ಚೇತನ ಸಂವಿಧಾನ ಶಿಲ್ಪಿ
ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಗ್ರಾಮ ಪಂಚಾಯಿತಿ ಸದಸ್ಯ ರಾಂಪುರ ಲೋಕೇಶ್ ಹೇಳಿದರು.

ಅವರು ತಾಲೂಕಿನ ರಾಂಪುರ ಗ್ರಾಮದಲ್ಲಿ ಜೈ ಭೀಮ್ ಯುವಕರ ಸಂಘವು ಆಯೋಜಿಸಿದ್ದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಶಕ್ಕೆ ಸಂವಿಧಾನವನ್ನು ಕೊಟ್ಟಂತಹ ವಿಶ್ವ ಜ್ಞಾನಿಗಳಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಗುಣಗಳನ್ನು ಸರ್ವರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.
ಅವರು ನಡೆದು ಬಂದ ಹಾದಿಯಲ್ಲಿ ನಾವುಗಳು ಸಾಗಬೇಕು. ಅವರ ಜನ್ಮದಿನವನ್ನು ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸುವ ಕಾರ್ಯಕ್ಕೆ ಸೀಮಿತಗೊಳಿಸದೆ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಬೇಕು ಹಾಗೂ ವಿವಿಧ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಆ ಮೂಲಕ ಅವರಿಗೆ ಗೌರವ ನಮನ ಸಲ್ಲಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಳಂದ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಮಹಾಲಿಂಗಸ್ವಾಮಿ, ಸಂಘದ ಪದಾಧಿಕಾರಿಗಳಾದ ಗೋವಿಂದ, ಸುರೇಶ, ಉಮೇಶ, ಪುನೀತ್, ಮಹದೇವ, ರಾಮಚಂದ್ರ, ಲೋಕೇಶ, ಬಿ.ಪುನೀತ್, ಅನಿಲ್, ಪುಟ್ಟಸ್ವಾಮಿ, ಚೆನ್ನಪ್ಪ, ಪ್ರತೀಫು, ಅಖಿಲೇಶ್, ಚನ್ನಕೇಶವ, ಸುನಿಲ್, ಪ್ರವೀಣ, ಜೆ.ಮಂಜು, ಯೋಗೇಶ್, ಮೂರ್ತಿ, ಮನು, ಭವನ್, ರಘು, ರಾಮಯ್ಯ, ಪ್ರೇಮ, ದೇವಮ್ಮ, ಶಾಂತಮ್ಮ ಸೇರಿದಂತೆ ಹಲವರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading