September 16, 2025
FB_IMG_1731682006737.jpg


ಹಿರಿಯೂರು :
ಮಧ್ಯ ಕರ್ನಾಟಕದ ರೈತರ ಏಕೈಕ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಗುರುವಾರ 128 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಪ್ರತಿ ದಿನ 1040 ಕ್ಯೂಸೆಕ್ ನೀರಿನ ಒಳ ಹರಿವು ಇದೆ.
ತರೀಕೆರೆ ಸಮೀಪದ ಬೆಟ್ಟದತಾವರೆಕೆರೆ ಸಮೀಪ ಇರುವ ಪಂಪ್ ಹೌಸ್ ನಿಂದ ಪ್ರತಿನಿತ್ಯ ಒಂದು ಪಂಪ್ ರನ್ ಮಾಡಿ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುತ್ತಿರುವುದರಿಂದ ಸುಮಾರು 700 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯ ಭರ್ತಿಗೆ 2 ಅಡಿ ಬಾಕಿ ಇದ್ದು,ಪ್ರತಿ ನಿತ್ಯ ಒಂದು ಸಾವಿರ ಕ್ಯೂಸೆಕ್ ನಷ್ಟು ನೀರು ಇನ್ನೂ 20 ದಿನಗಳ ಕಾಲ ಹರಿದರೆ ವಾಣಿವಿಲಾಸ ಸಾಗರ ಕೋಡಿ ಬೀಳಲಿದೆ.
ಒಂದು ವಿಚಾರವೆಂದರೆ ಇಂದು, ನಾಳೆ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಹೆಚ್ಚಿನ ಕ್ಯೂಸೆಕ್ ನೀರು ಹರಿದರೆ ಇನ್ನು ಎರಡು ಮೂರು ದಿನಗಳಲ್ಲಿ ಕೋಡಿ ಬೀಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
ಒಂದು ವೇಳೆ ಹವಾಮಾನ ಮುನ್ಸೂಚನೆಯಂತೆ ಮಳೆ ಸುರಿಯದೇ ಇದ್ದರೂ ಭದ್ರಾ ಡ್ಯಾಂನಲ್ಲಿ ಸಾಕಷ್ಟು ನೀರಿದ್ದು ಹಳ್ಳ ಕ್ಕೆ ಹರಿ ಬಿಡಲಾಗುತ್ತಿದೆ. ಅದೇ ನೀರನ್ನ ವಾಣಿ ವಿಲಾಸ ಸಾಗರಕ್ಕೆ ಪಂಪ್ ಮಾಡಿ ನಿತ್ಯ ಮೂರು ಸಾವಿರ ಕ್ಯೂಸೆಕ್ ನೀರು ಹರಿಸಿದರೆ ಒಂದು ವಾರದೊಳಗೆ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಲಿದೆ. ಈ ಬಗ್ಗೆ ಭದ್ರಾ ಮೇಲ್ದಂಡೆ ಅಧಿಕಾರಿಗಳು, ರಾಜ್ಯ ಸರ್ಕಾರ ಚಿಂತನೆ ಮಾಡಬೇಕಿದೆ.
ಹಾಗೇ ಮಾಡಿದಲ್ಲಿ ವಾಣಿ ವಿಲಾಸ ಸಾಗರ ತನ್ನ ಇತಿಹಾಸದ ಒಡಲಲ್ಲಿ ಮೂರು ಬಾರಿ ಭರ್ತಿಯಾದ ದಾಖಲೆ ಉಳಿಯಲಿದೆ. 1933 ರಲ್ಲಿ ಮೊದಲ ಬಾರಿಗೆ ವಿವಿ ಸಾಗರ ಡ್ಯಾಂ ಭರ್ತಿಯಾಗಿ ಕೋಡಿ ಹರಿದಿತ್ತು. ಇದಾದ 89 ವರ್ಷಗಳ ನಂತರ ಅಂದರೆ 2022ರಲ್ಲಿ 2ನೇ ಬಾರಿಗೆ ಕೋಡಿ ಬೀಳುವ ಎಲ್ಲ ಸಾಧ್ಯತೆಗಳು ಕಾಣುತ್ತಿದ್ದು ಹಾಗಾಗಿ ಮೂರನೇ ಸಲ ಕೋಡಿ ಬೀಳುವ ಕ್ಷಣಗಳಿಗೆ ಅಧಿಕಾರಿಗಳು ಸೇರಿದಂತೆ ರೈತರು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ.
ಇನ್ನು ವಾಣಿ ವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, ಜಲಾಶಯ 130 ಅಡಿಗೆ ಕೋಡಿ ಹರಿಯಲಿದೆ. ಇದೀಗ ಜಲಾಶಯದಲ್ಲಿ 30ಟಿ.ಎಂ.ಸಿ. ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯವನ್ನು ಹೊಂದಿದ್ದು, ವಾಣಿವಿಲಾಸ ಜಲಾಶಯ ತುಂಬಿ ಕೋಡಿ ಬೀಳುವ ಸುದ್ದಿ ಕೇಳಲು ತಾಲ್ಲೂಕಿನ ರೈತರು ತುದಿಗಾಲಿನಲ್ಲಿ ನಿಂತಿದ್ದಾರೆ .

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading