ಚಳ್ಳಕೆರೆ: ಮಹಾಶಿವರಾತ್ರಿ ಅಂಗವಾಗಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ವತಿಯಿಂದ ನಗರದ ಬಿಸಿನೀರುಮುದ್ದಪ್ಪ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಆಧ್ಯಾತ್ಮಿಕ ಜಾದು ಪ್ರದರ್ಶನವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ. ರಘುಮೂರ್ತಿ ಅವರು ಭಾಗವಹಿಸಿ ಜಾದು ಪ್ರದರ್ಶನವನ್ನು ವೀಕ್ಷಿಸಿದರು.









ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂತಹ ಆಧ್ಯಾತ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸಕಾರಾತ್ಮಕ ಚಿಂತನೆ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಪ್ರದರ್ಶನದಲ್ಲಿ ಜೀವನದಲ್ಲಿ ಏಕಾಗ್ರತೆ ಮತ್ತು ಜ್ಞಾನದ ಕೊರತೆಯಿಂದ ಉಂಟಾಗುವ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳ ಕುರಿತು ಮನಮುಟ್ಟುವ ರೀತಿಯಲ್ಲಿ ಸಂದೇಶಗಳನ್ನು ನೀಡಲಾಯಿತು. ಆತ್ಮಶಾಂತಿ, ಧ್ಯಾನ ಹಾಗೂ ನೈತಿಕ ಮೌಲ್ಯಗಳ ಮಹತ್ವವನ್ನು ಜಾದು ಪ್ರದರ್ಶನದ ಮೂಲಕ ಪರಿಣಾಮಕಾರಿಯಾಗಿ ತೋರಿಸಲಾಯಿತು.
ವಕ್ತಾರರು ಮಾತನಾಡಿ, ಆತ್ಮಜ್ಞಾನ ಮತ್ತು ಸಕಾರಾತ್ಮಕ ಚಿಂತನೆಯ ಮೂಲಕವೇ ಮನುಷ್ಯನು ನೆಮ್ಮದಿಯ ಜೀವನ ನಡೆಸಬಹುದು. ಈಶ್ವರೀಯ ಜ್ಞಾನದಿಂದ ವ್ಯಕ್ತಿತ್ವ ವಿಕಾಸ ಸಾಧ್ಯವೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರದ ಅನೇಕ ಭಕ್ತರು, ನಾಗರಿಕರು ಮತ್ತು ಯುವಕರು ಭಾಗವಹಿಸಿ ಆಧ್ಯಾತ್ಮಿಕ ಸಂದೇಶಗಳಿಂದ ಪ್ರೇರಿತರಾದರು. ಮಹಾಶಿವರಾತ್ರಿ ಪ್ರಯುಕ್ತ ಆಯೋಜಿಸಲಾದ ಈ ಕಾರ್ಯಕ್ರಮ ಭಕ್ತರ ಮನಸ್ಸಿಗೆ ಶಾಂತಿ ಹಾಗೂ ಆತ್ಮವಿಶ್ವಾಸ ತುಂಬುವಂತಾಯಿತು.
About The Author
Discover more from JANADHWANI NEWS
Subscribe to get the latest posts sent to your email.