ಚಳ್ಳಕೆರೆ: ನಗರದ ಹೋಟೆಲ್ ಹಾಗೂ ಬೇಕರಿ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳುವುದಲ್ಲದೆ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಆರೋಗ್ಯ ಇಲಾಖೆಯ ಮಾನದಂಡಗಳನ್ನು ಅನುಸರಿಸದಿದ್ದಲ್ಲಿ ವರ್ತಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಕಾಶಿ ಎಚ್ಚರಿಕೆ ನೀಡಿದರು.



ಅಪರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಆಹಾರ ಸುರಕ್ಷತಾ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ನಗರದ ಪಾವಗಡ ರಸ್ತೆ ಬೆಂಗಳೂರು ರಸ್ತೆ ವಾಲ್ಮೀಕಿ ವೃತ್ತ ಮಹದೇವಿ ರಸ್ತೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಹೋಟೆಲ್ ಬೇಕರಿಗಳಿಗೆ ಭೇಟಿ ನೀಡಿ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಛತೆ ಕಾಪಾಡದ ಹೋಟೆಲ್ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿ ಡಾ. ಕಾಶಿ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್ ಸಾಗರ್ ಹಾಗೂನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.