
ಹಿರಿಯೂರು:
ಮಧ್ಯಕರ್ನಾಟಕದ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಮಂಗಳವಾರ 122.60ಅಡಿಗೆ ಏರಿಕೆಯಾಗಿದೆ. ವಾಣಿವಿಲಾಸ ಜಲಾಶಯಕ್ಕೆ ಕಳೆದೊಂದು ತಿಂಗಳಿನಿಂದ ಭದ್ರಾ ಜಲಾಶಯದಿಂದ ಪ್ರತಿದಿನ 2426 ಕ್ಯೂಸೆಕ್ ನೀರಿನ ಒಳ ಹರಿವು ಇದೆ.
ತರೀಕೆರೆ ಸಮೀಪದ ಬೆಟ್ಟದ ತಾವರಕೆರೆಯ ಪಂಪ್ ಹೌಸ್ ನಿಂದ ಒಂದು ಪಂಪ್ ಲಿಫ್ಟ್ ಮಾಡಲಾಗುತ್ತಿದೆ. ಲಿಫ್ಟ್ ಮಾಡಲಾಗುತ್ತಿರುವ ನೀರಿನ ಒಳ ಹರಿವು 55ಒ ಕ್ಯೂಸೆಕ್ ಇದೆ. ವಾಣಿವಿಲಾಸಸಾಗರ ಜಲಾಶಯಕ್ಕೆ ಪಂಪ್ ಮಾಡುವ ನೀರು ಸೇರದಂತೆ ಹೊಸದುರ್ಗ, ಕಡೂರು, ಬಿರೂರು, ತರೀಕೆರೆ, ಅಜ್ಜಂಪುರ ಸುತ್ತಮುತ್ತಲ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.
ಮಂಗಳವಾರ ಹೆಚ್ಚಿನ ಕ್ಯೂಸೆಕ್ ನೀರು ಹರಿದು ಬಂದಿದ್ದು, ಇದರಿಂದ ಪ್ರಸ್ತುತ ಜಲಾಶಯದ ನೀರಿನಮಟ್ಟ 122.6ಅಡಿಗೆ ನೀರು ಏರಿಕೆಯಾಗಿದೆ. ಇನ್ನು ವಾಣಿವಿಲಾಸ ಸಾಗರ ಜಲಾಶಯದ ನೀರಿನ ಸಂಗ್ರಹ ಸಾಮಾರ್ಥ್ಯ ಒಟ್ಟು 135 ಅಡಿ ಆಗಿದ್ದು, 130 ಅಡಿಗೆ ಕೋಡಿ ಹರಿಯಲಿದೆ. ಜಲಾಶಯದಲ್ಲಿ 30 ಟಿ.ಎಂ.ಸಿ ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ.


About The Author
Discover more from JANADHWANI NEWS
Subscribe to get the latest posts sent to your email.