March 16, 2026

ಚಿತ್ರದುರ್ಗ ಅ.16:
ತೋಟಗಾರಿಕೆ ಸಹಕಾರ ಸಂಘಗಳು ಮತ್ತು ತಾಲ್ಲೂಕು ಕೃಷಿ ಮಾರಾಟ ಸಹಕಾರ ಸಂಘಗಳಿಂದ ಹಾಪ್ ಕಾಮ್ಸ್ (ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ 13 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಿಂದ ಎಸ್.ಪಿ.ಲತಾ, ಹೆಚ್.ಎನ್.ತಿಪ್ಪೇಸ್ವಾಮಿ, ಎನ್.ಡಿ.ಚಂದ್ರಶೇಖರ ರೆಡ್ಡಿ, ಹಿರಿಯೂರಿರು ತಾಲ್ಲೂಕಿನಿಂದ ಆರ್.ಕೀರ್ತಿಕುಮಾರಿ, ಎಸ್.ಜೆ.ಹನುಮಂತರಾಯ, ಚಳ್ಳಕೆರೆ ತಾಲ್ಲೂಕಿನಿಂದ ಮಲ್ಲಿಕಾರ್ಜುನ, ಹೆಚ್.ಟಿ.ಶಶಿಧರ, ಮೊಳಕಾಲ್ಮೂರು ತಾಲ್ಲೂಕಿನಿಂದ ಹೆಚ್.ಟಿ.ನಾಗರೆಡ್ಡಿ, ಎ.ಚನ್ನಬಸಪ್ಪ, ಹೊಳಲ್ಕೆರೆ ತಾಲ್ಲೂಕಿನಿಂದ ಟಿ.ತಿಮ್ಮಪ್ಪ, ಅರುಣಕುಮಾರ್.ಎಂ.ಬಿ. ಹೊಸದುರ್ಗ ತಾಲ್ಲೂಕಿನಿಂದ ಟಿ.ಎಸ್.ಶಂಕರಮೂರ್ತಿ, ಜೆ.ಡಿ.ಕೆಂಚವೀರಪ್ಪ ನಿದೇಶಕರಾಗಿ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಅ.19 ರಂದು ಚುನಾವಣೆ ದಿನಾಂಕ ನಿಗದಿ ಪಡಿಸಲಾಗಿತ್ತು. ಆದರೆ ಅ.14 ರಂದು ನಾಮಪತ್ರ ಪರಿಶೀಲನೆ ನಂತರ 13 ಸದಸ್ಯರು ಅವಿರೊಧ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
========

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading