September 17, 2025
IMG-20241116-WA0107.jpg

ನಾಯಕನಹಟ್ಟಿ:: ಪಟ್ಟಣದ ಪ್ರತಿಯೊಬ್ಬ ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳ ಬಗ್ಗೆ ಜಾಗೃತರಾಗಿ ಎಂದು ಪಿಎಸ್ಐ ದೇವರಾಜ್ ಹೇಳಿದ್ದಾರೆ.
ಶನಿವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಮಯೂರ ಇಂಟರ್ನ್ಯಾಷನಲ್ ಸ್ಕೂಲ್ ವತಿಯಿಂದ ಆಯೋಜಿಸಿದ್ದ ರಸ್ತೆ ಸಂಚಾರ ನಿಯಮಗಳ ಬಗ್ಗೆ ಶಾಲೆಯ ವಿದ್ಯಾರ್ಥಿಗಳಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಪಟ್ಟಣದ ಪ್ರತಿಯೊಬ್ಬ ಸಾರ್ವಜನಿಕರು ವಾಹನ ಚಲಾಯಿಸುವಾಗ ಅತಿ ವೇಗದಿಂದ ಸಂಚಾರ ಮಾಡುವುದು ಕಡಿಮೆ ಮಾಡಿ ಯಾರು ಸಹ ತ್ರಿಬಲ್ ರೀಡಿಂಗ್ ಮಾಡಬೇಡಿ ತಮ್ಮ ತಮ್ಮ ವಾಹನಗಳಿಗೆ ಇನ್ಸೂರೆನ್ಸ್ ಡಿಎಲ್ ಪಡೆದುಕೊಂಡು ವಾಹನ ಚಾಲನೆ ಮಾಡಬೇಕು ಅತಿ ವೇಗದಿಂದ ವಾಹನ ಚಲಾಯಿಸಿ ರಸ್ತೆಗೆ ನಿಮ್ಮ ರಕ್ತವನ್ನು ಹರಿಸಬೇಡಿ ನಿಮ್ಮ ರಕ್ತ ಇನ್ನೊಬ್ಬರ ಜೀವ ಉಳಿಸಲು ಸಹಾಯ ಮಾಡಿ ಸಾರ್ವಜನಿಕರು ತಪ್ಪದೆ ರಸ್ತೆ ಸಂಚಾರ ನೀವುಗಳನ್ನು ಪಾಲಿಸಿ ಎಂದು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮನವಿಯನ್ನು ಮಾಡಿದರು.

ಇದೇ ಸಂದರ್ಭದಲ್ಲಿ ಮಯೂರ ಇಂಟರ್ನ್ಯಾಷನಲ್ ಸ್ಕೂಲ್ ಕಾರ್ಯದರ್ಶಿ ಮೈಲಾರಸ್ವಾಮಿ, ಮುಖ್ಯ ಶಿಕ್ಷಕ ಮಹಾಂತೇಶ್ ಹಾಗೂ ಶಾಲೆಯ ಶಿಕ್ಷಕ ಶಿಕ್ಷಕಿಯರು ಮತ್ತು ಪಟ್ಟಣದ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳಾದ ಸತೀಶಚಾರಿ, ಲೋಹಿತ್, ಸೇರಿದಂತೆ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading