ಹಿರಿಯೂರು :
ನಗರದ ನಾಗರೀಕರು ನಗರಸಭೆ ಕಚೇರಿಯ 5% ರಷ್ಟು ರಿಯಾಯಿತಿ ದರದ ಸದುಪಯೋಗ ಪಡೆದುಕೊಂಡು ಕಂದಾಯ ಪಾವತಿ ಮಾಡಲು ಬಂದಿದ್ದು, ಅತಿಯಾದ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಬಿಸಿಲಿನ ಬೇಗೆ ತಣಿಸಲು ಆಸ್ತಿ ಮಾಲೀಕರು ಮತ್ತು ಸಾರ್ವಜನಿಕರಿಗೆ ನಗರಸಭೆ ವತಿಯಿಂದ ತಂಪಾದ ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಎ.ವಾಸೀಂ ಹೇಳಿದರು.
ನಗರಸಭೆ ಆವರಣದಲ್ಲಿ ಕಂದಾಯ ಪಾವತಿಸಲು ಬಂದ ಆಸ್ತಿ ಮಾಲೀಕರು ಮತ್ತು ಸಾರ್ವಜನಿಕರಿಗೆ ನಗರಸಭೆ ವತಿಯಿಂದ ಮಜ್ಜಿಗೆ ವ್ಯವಸ್ಥೆ ಕಲ್ಪಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ನಗರಸಭೆ ಕಛೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.