February 18, 2026
Untitled-1-copy-32.jpg

ಚಿತ್ರದುರ್ಗಫೆ.18:
ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ರಾಯಚೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಫೆ.28 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲೊಮಾ / ಪತ್ರಿಕೋದ್ಯಮ / ಸಮೂಹ ಮಾಧ್ಯಮದಲ್ಲಿ ಪದವಿ ಅಥವಾ ಯಾವುದೇ ಪದವಿಯೊಂದಿಗೆ ಮಾಧ್ಯಮದಲ್ಲಿ ಎರಡು ವರ್ಷಗಳ ಅನುಭವ. ವಯೋಮಿತಿ 24 ರಿಂದ 50 ವರ್ಷ (ಅರ್ಜಿ ಸಲ್ಲಿಸುವ ಕೊನೆಯ ದಿನಕ್ಕೆ ಸರಿಯಾಗಿ), ಅರ್ಜಿದಾರರು ಅರ್ಜಿ ಸಲ್ಲಿಸುವ ಜಿಲ್ಲೆಯ ಜಿಲ್ಲಾ ಕೇಂದ್ರದ ನಿವಾಸಿಯಾಗಿರಬೇಕು. ಅಥವಾ ಕೇಂದ್ರದಿಂದ 10 ಕಿ.ಮೀ. ಒಳಗಿನ ನಿವಾಸಿಯಾಗಿರಬೇಕು. ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್‍ನಲ್ಲಿ ಜ್ಞಾನ ಹೊಂದಿರಬೇಕು. ಸುದ್ದಿ ಸಂಗ್ರಹಕ್ಕೆ ಬೇಕಾದ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಅಗತ್ಯ.
ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಇದೇ ಫೆಬ್ರವರಿ 28 ರೊಳಗೆ ತಲುಪುವಂತೆ The Deputy Director General (E) , (Attn: Regional News Unit), Akashvani, Raj Bhavan Road, Bengaluru 560 001 ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080 – 22356344 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
==============

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading