December 14, 2025
IMG-20250319-WA0162.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ದಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಶ್ರೀ ಭೈರವೇಶ್ವರ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ತ್ರಿವೇಣಿ ಹೇಳಿದರು.

ಅವರು ಪಟ್ಟಣದ ಶ್ರೀ ಭೈರವೇಶ್ವರ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರುಗಳಿಗೆ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳ ವಿಜೇತರುಗಳಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡಬೇಕು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪೋಷಕರುಗಳು ಮತ್ತು ಶಾಲೆಗಳಲ್ಲಿ ಶಿಕ್ಷಕರುಗಳು ಗುರುತಿಸಿ ಪ್ರೋತ್ಸಾಹಿಸುವಂತ ಕೆಲಸವನ್ನು ನಿರಂತರವಾಗಿ ಮಾಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಗಳನ್ನು ಕಲ್ಪಿಸಿಕೊಡಬೇಕು ಆ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗಳು ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆಯನ್ನು ಹಾರಿಸುವಂತೆ ಮಾಡಬೇಕು ಎಂದರು.

ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರುಗಳಿಗೆ ಆಯೋಜಿಸುವ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳಷ್ಟೇ ಆಸಕ್ತಿಯಿಂದ ಪೋಷಕರುಗಳು ಪಾಲ್ಗೊಂಡು ಭಾಗವಹಿಸುವ ಮೂಲಕ ತಮ್ಮ ಮಕ್ಕಳಿಗೆ ಉತ್ತೇಜನ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಆಗಿದೆ ಎಂದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಶ್ರೀ ಶಾರದಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಎಸ್.ಕೆ.ರಮೇಶ್, ಸಂಯೋಜಕಿ ಅರ್ಪಿತಸೇನ್, ತನುಶ್ರೀ, ಮುಖ್ಯ ಶಿಕ್ಷಕಿ ಯಶಸ್ವಿನಿ, ಪತ್ರಕರ್ತರಾದ ಕೆ.ಟಿ.ಮೋಹನ್ ಕುಮಾರ್, ಎಸ್.ಬಿ.ಬಸವರಾಜು, ಶಿಕ್ಷಕರಾದ ಮಂಜುನಾಥ್, ಚಾಂದಿನಿ, ರಕ್ಷಿತಾ, ಲಕ್ಷ್ಮಿ, ಅಶ್ವಿನಿ, ಅಫ್ರಿನ್ ತಾಜ್, ಹನಿಫಕೌಸರ್, ಹೀನ ಕೌಸರ್, ರೇಖಾ, ಆರತಿ, ಸಾಮಿಯ ಅಂಜುಮ್, ಗೌತಮಿ, ಸಿಬ್ಬಂದಿಗಳು, ಪೋಷಕರುಗಳು, ವಿದ್ಯಾರ್ಥಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading