
ನಾಯಕನಹಟ್ಟಿ : ಹೋಬಳಿಯ ಎನ್ ದೇವರಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಅವ್ಯವಹಾರ ನಡೆದಿದೆ ಎಂದು ನಿರ್ದೇಶಕ ಕೆ ಓ ಬೋರಣ್ಣ ಗಂಭೀರ ಆರೋಪ ಮಾಡಿದರು.
ಪಟ್ಟಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು ಎನ್ ದೇವರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜಣ್ಣ ಇವರು ಸಂಘದ ವ್ಯಾಪ್ತಿಗೆ ಒಳಪಡುವ ಎನ್ ದೇವರಹಳ್ಳಿ, ಗೌರಿಪುರ, ಕುದಾಪುರ, ಕುದಾಪುರ ಲಂಬಾಣಿಹಟ್ಟಿ ಹಾಗೂ ಭೀಮನಕೆರೆ ಗ್ರಾಮದ ರೈತರಿಂದ ಅಕ್ರಮವಾಗಿ ದಾಖಲೆಗಳನ್ನು ಪಡೆದು, ರೈತರಿಗೆ ಮಾಹಿತಿ ನೀಡದೆ. ಅವರ ದಾಖಲೆಗಳ ಆಧಾರದ ಮೇಲೆ ಸಂಘದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಮೊತ್ತದ ಸಾಲವನ್ನು ಸೃಜಿಸಿಕೊಂಡು ಈ ಸಾಲದ ಮೊತ್ತವನ್ನು ರೈತರಿಗೆ ನೀಡದೆ, ವೈಯಕ್ತಿಕವಾಗಿ ಬಳಸಿಕೊಂಡಿರುವುದು ಇತ್ತೀಚಿನ ದಿನಾಂಕ 14.05.2025 ರಂದು ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ನಮ್ಮ ಗಮನಕ್ಕೆ ಬಂದಿರುತ್ತದೆ.







ಆದಕಾರಣ ಚಿತ್ರದುರ್ಗ ಜಿಲ್ಲಾ ಸಹಕಾರ ಬ್ಯಾಂಕಿನ ವ್ಯವಸ್ಥಾಪಕರಿಂದ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದರು.
About The Author
Discover more from JANADHWANI NEWS
Subscribe to get the latest posts sent to your email.