July 19, 2026
IMG-20260717-WA0137


ಚಳ್ಳಕೆರೆ, ಜು.19: ಶ್ರೀ ರಾಘವೇಂದ್ರ ತೀರ್ಥರ 355ನೇ ಆರಾಧನಾ ಮಹೋತ್ಸವ ಅಂಗವಾಗಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ (16-07-2026) ಸಂಜೆ 6:30 ಗಂಟೆಗೆ ಭಕ್ತರ ಸಮ್ಮುಖದಲ್ಲಿ ನೆರವೇರಿತು.
ಸಮಾರಂಭದಲ್ಲಿ ಮಹೋತ್ಸವದ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿ, ಆಗಸ್ಟ್ 29, 30 ಮತ್ತು 31 ರಂದು ನಡೆಯಲಿರುವ ಆರಾಧನಾ ಕಾರ್ಯಕ್ರಮಗಳ ವಿವರವನ್ನು ಪ್ರಕಟಿಸಲಾಯಿತು.
ಮಹೋತ್ಸವದ ಕಾರ್ಯಕ್ರಮಗಳು ಈ ಕೆಳಗಿನಂತಿವೆ:
ಆಗಸ್ಟ್ 29: ಪೂರ್ವ ಆರಾಧನೆ
ಆಗಸ್ಟ್ 30: ಮಧ್ಯ ಆರಾಧನೆ
ಆಗಸ್ಟ್ 31: ಉತ್ತರ ಆರಾಧನೆ
ಈ ಮೂರು ದಿನಗಳ ಕಾಲ ವಿಶೇಷ ಪೂಜೆಗಳು, ಪಂಚಾಮೃತ ಅಭಿಷೇಕ, ಅಲಂಕಾರ, ಮಂತ್ರಾಕ್ಷತೆ, ತೀರ್ಥ ಪ್ರಸಾದ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾಗುವಂತೆ ಸಮಿತಿಯವರು ಮನವಿ ಮಾಡಿದ್ದಾರೆ.
ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಆರಾಧನಾ ಮಹೋತ್ಸವ ಸಮಿತಿ ಸದಸ್ಯರು, ಗಣ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading