
ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಶ್ರೀ ಜಂಗಮ ಮಠದ ಮಹಾದ್ವಾರ, ಶ್ರೀ ಚೌಡೇಶ್ವರಿ ದೇವಿ ಪ್ರಸಾದ ನಿಲಯ, ಶ್ರೀ ಗುರು ಚಂದ್ರಶೇಖರ ಯಾತ್ರಿ ನಿವಾಸ, ಧ್ಯಾನ ಮಂದಿರ, ಶ್ರೀ ಕಾಮಧೇನು ಗೋಶಾಲಾ ಉದ್ಘಾಟನೆ ಹಾಗೂ ಧರ್ಮ ಜಾಗೃತಿ ಕಾರ್ಯಕ್ರಮವನ್ನು ನ.21ರ ಗುರುವಾರ ಸಂಜೆ 5ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಜಂಗಮ ಮಠದ ಪರಮಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದ್ದಾರೆ.






ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ.ರವಿಶಂಕರ್ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಕರ್ಪೂರವಳ್ಳಿ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಬಾಳೆಹೊನ್ನೂರು ಶಾಖ ಮಠ ಯಡಿಯೂರಿನ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮಿಗಳು, ಆನೇಕಲ್ ನ ರಾಜಪುರ ಸಂಸ್ಥಾನ ಮಠದ ಶ್ರೀ ಪಟ್ಟದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಗಾವಡಗೆರೆಯ ಶ್ರೀ ಗುರುಲಿಂಗ ಜಂಗಮ ದೇವರ ಮಠದ ಶ್ರೀ ನಟರಾಜ ಸ್ವಾಮಿಗಳು, ಬಿಡದಿಯ ಚೌಕಿ ಮಠದ ಶ್ರೀ ಹುಚ್ಚಪ್ಪ ಸ್ವಾಮೀಜಿಗಳು, ರಾವಂದೂರಿನ ಮುರುಘಾಮಠದ ಶ್ರೀ ಮೋಕ್ಷಪತಿ ಸ್ವಾಮೀಜಿಗಳು, ನುಗ್ಗೆಹಳ್ಳಿ ಪುರವರ್ಗ ಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿಗಳು, ವಿಧಾನಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್, ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮಿಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪುಷ್ಪಲತಾ ರಮೇಶ್, ಮೈಮುಲ್ ನಿರ್ದೇಶಕಿ ಮಲ್ಲಿಕಾ ರವಿಕುಮಾರ್, ತಹಶೀಲ್ದಾರ್ ಎಸ್.ಎನ್.ನರಗುಂದ, ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣರಾಜು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಪ್ರಶಸ್ತಿ ಪ್ರದಾನ: ಶಿವಮೊಗ್ಗದ ವಾಣಿಜ್ಯೋದ್ಯಮಿ
ಬಿ.ಎಸ್.ಮಹದೇವು ಅವರಿಗೆ ಧರ್ಮ ಸೇವಾಭೂಷಣ ಪ್ರಶಸ್ತಿ, ವೀರಶೈವ ಮುಖಂಡ ಸಿ.ಪಿ.ರಮೇಶ್ ಕುಮಾರ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ, ಬಸವಾಪಟ್ಟಣದ ತೊಟ್ಟಿಮನೆ ವಂಶಸ್ಥ ಶ್ರೀಕಂಠಶೆಟ್ಟಿ ಅವರಿಗೆ ಗುರು ಸೇವಾ ರತ್ನ ಪ್ರಶಸ್ತಿ, ಶಿವಮೊಗ್ಗದ ಉದ್ಯಮಿ
ಬಿ.ಜಿ.ಓಂಕಾರ ಮೂರ್ತಿ ಅವರಿಗೆ ಜಂಗಮ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಹಾಗೂ ಬಸವಾಪಟ್ಟಣದ ಉದ್ಯಮಿ ಕೆಂಡಗಣ್ಣಶೆಟ್ಟಿ, ಶಿವಮೊಗ್ಗದ ಉದ್ಯಮಿ ದೊರೇಶ್ ಬಾಬು, ಹೂವಿನಳ್ಳಿಯ ಲೀಲಾವತಿ ಮೃತ್ಯುಂಜಯ, ಚನ್ನರಾಯಪಟ್ಟಣದ ಸುಮ ಬಸವರಾಜು ಅವರುಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.