December 14, 2025
FB_IMG_1732028263487.jpg


ಹಿರಿಯೂರು :
ಮಧ್ಯ ಕರ್ನಾಟಕದ ರೈತರ ಏಕೈಕ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಮಂಗಳವಾರ 128.15 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಪ್ರತಿ ದಿನ 462 ಕ್ಯೂಸೆಕ್ ನೀರಿನ ಒಳ ಹರಿವು ಇದೆ.
ತರೀಕೆರೆ ಸಮೀಪದ ಬೆಟ್ಟದತಾವರೆಕೆರೆ ಸಮೀಪ ಇರುವ ಪಂಪ್ ಹೌಸ್ ನಿಂದ ಪ್ರತಿನಿತ್ಯ ಒಂದು ಪಂಪ್ ರನ್ ಮಾಡಿ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುತ್ತಿರುವುದರಿಂದ ಸುಮಾರು 1000 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯ ಭರ್ತಿಗೆ 2 ಅಡಿ ಬಾಕಿ ಇದ್ದು,ಪ್ರತಿ ನಿತ್ಯ ಒಂದು ಸಾವಿರ ಕ್ಯೂಸೆಕ್ ನಷ್ಟು ನೀರು ಇನ್ನೂ 20 ದಿನಗಳ ಕಾಲ ಹರಿದರೆ ವಾಣಿವಿಲಾಸ ಸಾಗರ ಕೋಡಿ ಬೀಳಲಿದೆ.
ಒಂದು ವಿಚಾರವೆಂದರೆ ಇಂದು, ನಾಳೆ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಹೆಚ್ಚಿನ ಕ್ಯೂಸೆಕ್ ನೀರು ಹರಿದರೆ ಇನ್ನು ಎರಡು ಮೂರು ದಿನಗಳಲ್ಲಿ ಕೋಡಿ ಬೀಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
ಇನ್ನು ವಾಣಿ ವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, ಜಲಾಶಯ 130 ಅಡಿಗೆ ಕೋಡಿ ಹರಿಯಲಿದೆ. ಇದೀಗ ಜಲಾಶಯದಲ್ಲಿ 30ಟಿ.ಎಂ.ಸಿ. ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯವನ್ನು ಹೊಂದಿದ್ದು, ವಾಣಿವಿಲಾಸ ಜಲಾಶಯ ತುಂಬಿ ಕೋಡಿ ಬೀಳುವ ಸುದ್ದಿ ಕೇಳಲು ತಾಲ್ಲೂಕಿನ ರೈತರು ತುದಿಗಾಲಿನಲ್ಲಿ ನಿಂತಿದ್ದಾರೆ .

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading