January 29, 2026
IMG-20260120-WA0278.jpg

ಹೊಸದುರ್ಗ:
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ಗ್ರಾಮೀಣ ಭಾಗದ ಜನರ ಉದ್ಯೋಗ ಹಕ್ಕನ್ನು ಕಸಿದುಕೊಂಡು ಆರ್ಥಿಕತೆಯನ್ನು ನಾಶ ಮಾಡಲು ಮುಂದಾಗಿದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಆರೋಪಿಸಿದರು.
ಪಟ್ಟಣದ ತಾಲೂಕು ಸಾಮರ್ಥ್ಯ ಸೌಧದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಮನರೇಗಾ ಉಳಿಸಿ ಜನಜಾಗೃತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗ್ರಾಮೀಣ ಕೂಲಿಕಾರರಿಗೆ ಭದ್ರ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮನರೇಗಾ ಯೋಜನೆಯನ್ನು ಜಾರಿಗೆ ತಂದರು ಹಾಗೂ ಅದಕ್ಕೆ ಕಾಯ್ದೆಯ ರೂಪ ನೀಡಿದರು. ಆದರೆ ಇಂದಿನ ಕೇಂದ್ರ ಸರ್ಕಾರ ಈ ಯೋಜನೆಗೆ ಅನುದಾನ ಕಡಿತಗೊಳಿಸಿ, ಹಂತಹಂತವಾಗಿ ದುರ್ಬಲಗೊಳಿಸುತ್ತಿದೆ ಎಂದು ಟೀಕಿಸಿದರು.
ಮನರೇಗಾ ಯೋಜನೆ ಗ್ರಾಮೀಣ ಜನರ ಜೀವನಾಧಾರವಾಗಿದ್ದು, ಇದನ್ನು ಉಳಿಸಿಕೊಳ್ಳಲು ಜನರು ಜಾಗೃತರಾಗಬೇಕು ಎಂದು ಅವರು ಕರೆ ನೀಡಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading