
ವರದಿ: ಶಿವಮೂರ್ತಿ ನಾಯಕನಹಟ್ಟಿ
ನಾಯಕನಹಟ್ಟಿ : ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಾಯಕನಹಟ್ಟಿ
ಹೋಬಳಿಯನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿಸುವಂತೆ ವಟೇಲ್ ಕೆ ಬಿ ಕೃಷ್ಣೆಗೌಡ
ಆಗ್ರಹಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಯಕನಹಟ್ಟಿ ಹೋಬಳಿ ಸಾಮಾಜಿಕ
ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶವಾಗಿದೆ ಮತ್ತು ಅತೀ ಕಡಿಮೆ ಮಳೆ ಬೀಳುವ ಪ್ರದೇಶವಾಗಿದೆ.ಸಮೀಪದಲ್ಲಿರುವ ತುರುವನೂರು ಹೋಬಳಿಯನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿಸಿದ್ದು, ಆಡಳಿತ ಚಿತ್ರದುರ್ಗ ತಾಲ್ಲೂಕಿಗೆ ಬರುತ್ತದೆ.ಅದೇ ರೀತಿ ನಾಯಕನಹಟ್ಟಿ ಹೋಬಳಿಯನ್ನು
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಕ್ಕೆ ಸೇರಿಸಿದ್ದು, ಆಡಳಿತ ಚಳ್ಳಕೆರೆ ತಾಲ್ಲೂಕಿಗೆ
ಬರುತ್ತದೆ.ಇದರಿಂದ ಸಾರ್ವಜನಿಕರಿಗೆ ದಾಖಲೆಗಳಿಗಾಗಿ ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕು ಕೇಂದ್ರಗಳಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.ಆದ್ದರಿಂದ ನಾಯಕನಹಟ್ಟಿ ಹೋಬಳಿಯನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿಸಿದರೆ ತುಂಬಾ ಅನುಕೂಲವಾಗುತ್ತದೆ. ಚುನಾವಣಾ ದಾಖಲೆಗಳಿಗೆ ಚಳ್ಳಕೆರೆ ತಾಲ್ಲೂಕು ಕೇಂದ್ರದಲ್ಲಿ ಕೇಳಿದರೆ ಮೊಳಕಾಲ್ಮುರು ತಾಲ್ಲೂಕು
ಕೇಂದ್ರಕ್ಕೆ ಹೋಗುವಂತ ಹೇಳುತ್ತಾರೆ ಎಂದು ಹೇಳಿದರು.
ನಾಯಕನಹಟ್ಟೆ ಹೋಬಳಿಯನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿಸುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು, ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಂಡು
ನಾಯಕನಹಟ್ಟೆ ಹೋಬಳಿಯನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿಸಿ ಸಾರ್ವಜನಿಕರಿಗೆ
ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿಕೊಂಡರು.
About The Author
Discover more from JANADHWANI NEWS
Subscribe to get the latest posts sent to your email.