January 30, 2026
Screenshot_20241120_134416.png

ಚಳ್ಳಕೆರೆ ನ.20

ಮಕ್ಕಳ ಹಾಜರಾತಿಯನ್ನು ತಂತ್ರಾಂಶದಲ್ಲಿ ಅಳವಡಿಸುವ ಮೂಲಕ ಲೆಕ್ಕ ಪತ್ರ ನಿರ್ವಹಣೆ ಮಾಡುವಂತೆ ಅಕ್ಷರದಾಸೋಹ ಸಹಾಯಕ ನಿರ್ದೇಶಕ ಮಂಜುನಾಥ್ ಕಿವಿಮಾತು ಹೇಳಿದರು.
ನಗರದ ತಾಲೂಕು ಪಂಚಾಯ್ ಸಭಾಂಗಣದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯಶಿಕ್ಷಕರಿಗೆ ಅಕ್ಷರದಾಸೋಹ ಹಾಗೂ ಅಜೀಂ ಪ್ರೇಮ್ ಜೀ ಸಹಯೋಗದೊಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ ಪೂರೈಸಲು ಶಾಲಾ ಶಿಕ್ಷಣ ಇಲಾಖೆಯೊಂದಿಗೆ ‘ಅಜೀಂ ಪ್ರೇಮ್‌ಜೀ ಫೌಂಡೇಷನ್’ ಕೈಜೋಡಿಸಿದ್ದು
ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ವಾರದ ಎಲ್ಲ ಶಾಲಾ ದಿನಗಳಲ್ಲೂ ಮೊಟ್ಟೆ ವಿತರಿಸಲಾಗುತ್ತಿದ್ದು.
ಶಾಲಾ ಮಕ್ಕಳ ಹಾಜರಾತಿತನ್ನು ಅನ್ ಲೈನ್ ತಂತ್ರಾಂಶ ದಲ್ಲಿ ಎಂಟ್ರಿ ಮಾಡ ಮಾಡಬೇಕು ಮಕ್ಕಳ ಮೊಟ್ಟೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಅಜೀಂ ಪ್ರೇಮ್ ಜಿ ಸಂಸ್ಥೆ ಹಾಗೂ ಸರಕಾರ ಹದ್ದಿನ ನಿಗಾ ವಹಿಸುತ್ತಿದ್ದು ಅನಿರೀಕ್ಷತ ಭೇಟಿ ನೀಡಿದಾಗ ತಪ್ಪು ಕಂಡು ಬಂದರೆ ಅಮಾನತು ಶಿಕ್ಷೆ ಅನುಭವಿಸ ಬೇಕಾಗುತ್ತದ್ದೆ ಆದ್ದರಿಂದ ಬಿಸಿಯೂಟ ಮೊಟ್ಟೆ ವಿತರಣೆಯಲ್ಲಿ ಲೋಪವಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.
ಸಿಆರ್ ಪಿ ಮಹಂತೇಶ್ ತಂತ್ರಾಂಶದಲ್ಲಿ‌ಎಂಟ್ರಿ ಮಾಡುವ ಬಗ್ಗೆ ಮುಖ್ಯ ಶಿಕ್ಷಕರಿಗೆ ಮಾಹಿತಿ ನೀಡಿದರು.
ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ‌ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಹಾಜರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading