ಚಿತ್ರದುರ್ಗ ನ.20
2024-29 ಸಾಲಿನ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ, ಜಿಲ್ಲಾ ಖಜಾಂಜಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.
ನ.19 ರಂದು ನ.27 ವರೆಗೆ ಪ್ರತಿದಿನ ಬೆಳಿಗ್ಗೆ 11 ಗಂಟೆಯಿAದ ಸಂಜೆ 5 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನ.28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದು,್ದ ಅಂದೆ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ನ.29 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 4:30 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ತದನಂತರ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಡಿ.4 ರಂದು ಬೆಳಿಗ್ಗೆ 9 ಗಂಟೆಯಿAದ ಮಧ್ಯಾಹ್ನ 4 ಗಂಟೆ ವರೆಗೆ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾದ ನಂತರ ಮತಣ ಎಣಿಕೆ ನಡೆಸಿ, ಪಲಿತಾಂಶ ಪ್ರಕಟಿಸಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕು ಘಟಕಗಳ ಅಧ್ಯಕ್ಷರು ಸೇರಿದಂತೆ ಒಟ್ಟು 71 ಮತದಾರರು ಮತ ಚಲಾವಣೆ ಮಾಡಲಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಟಿ.ಜಗನ್ನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.