December 14, 2025
IMG-20241220-WA0077.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಮುಂಡೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೃಜನ ಶೀಲಾ ಕಾರ್ಯಕ್ರಮವನ್ನು ನಡೆಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬರಿಗೂ ಜೀವನದಲ್ಲಿ ಅರೋಗ್ಯವೊಂದು ಸರಿಯಿದ್ರೆ ಏನು ಬೇಕಾದರೂ ಸಾಧಿಸಬಹುದು. ಇಲ್ಲದಿದ್ರೆ ಜೀವನವೇ ಶೂನ್ಯ ಎಂದರು.

ಇವತ್ತು ಮಹಿಳೆಯರಲ್ಲಿ ಹಿಮುಗ್ಲೋಬಿನ್ ಕೊರತೆ ಬಗ್ಗೆ ಪರೀಕ್ಷೆ ಮಾಡಿ ಅದಕ್ಕೆ ಬೇಕಾದ ಪ್ರೊಟೀನ್ ಕೊಡುವ ಹಾಗೂ ಜಾಗೃತಿ ಮೂಡಿಸುವ ಉತ್ತಮ ಕೆಲಸ ಮಾಡಲಾಗುತ್ತಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.

ವೈದ್ಯ ಡಾ.ಅವಿನಾಶ್ ಮಾತನಾಡಿ ಹಿಮುಗ್ಲೋಬಿನ್ ಯಾಕೆ ಬೇಕು ಹಾಗೂ ಅದು ಕಡಿಮೆಯಿದ್ರೆ ಏನು ಪರಿಹಾರ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಡಾ.ಕಾವ್ಯಶ್ರೀ, ಹಿರಿಯರಾದ ಕೃಷ್ಣೆಗೌಡ, ಸರಳ, ಜ್ಞಾನ ವಿಕಾಸ ಸಮನ್ವಯಧಿಕಾರಿ ಸುಜಾತಾ, ಗೀತಾ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading