January 29, 2026
IMG-20250121-WA0191.jpg

ನಾಯಕನಹಟ್ಟಿ:: ಗ್ರಾಮೀಣ ಪ್ರದೇಶದ ಬಡ ಹೆಣ್ಣು ಮಕ್ಕಳಿಗೆ ಸರ್ಕಾರ ಪೌಷ್ಟಿಕ ಆಹಾರಕೆಟ್ಟು ವಿತರಣೆ ಮಾಡಲಾಗಿದೆ ಎಂದು ತಿಮ್ಮಪ್ಪಯ್ಯನಹಳ್ಳಿ ಗ್ರಾ. ಪಂ.ಉಪಾಧ್ಯಕ್ಷ ರಾಮಸಾಗರ ಎಂ. ತಿಪ್ಪೇಸ್ವಾಮಿ ಹೇಳಿದರು.

ಮಂಗಳವಾರ ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ರಾಮಸಾಗರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆರೋಗ್ಯ ಪುಷ್ಠಿ ಯೋಜನೆ ಅಡಿ ಗ್ರಾಮದ ಅರ್ಹ 13 ಜನ ಫಲಾನುಭವಿಗಳಿಗೆ ಪೌಷ್ಟಿಕ ಕಿಟ್ಟು ವಿತರಣೆ ಮಾಡಿ ಮಾತನಾಡಿದರು. ಗ್ರಾಮದ ಪ್ರತಿಯೊಬ್ಬರು ಸರ್ಕಾರ ನೀಡುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಇನ್ನೂ ಗ್ರಾಮದ ಕೆಪಿಸಿಸಿ ಎಸ್‌.ಟಿ. ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಎಂ. ಮಂಜಣ್ಣ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿವಂಗತ ಇಂದಿರಾ ಗಾಂಧಿ ಕಾಲದಿಂದಲೂ ಗ್ರಾಮೀಣ ಪ್ರದೇಶದ ಬಡ ಜನರಿಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ ಕಿಟ್ ವಿತರಣೆ ಮಾಡುತ್ತ ಬಂದಿದೆ ಅದರಂತೆ ಈ ದಿನ ರಾಮಸಾಗರ ಗ್ರಾಮದಲ್ಲಿ ಗ್ರಾಮದ ಗರ್ಭಿಣಿ ಬಾಣಂತಿಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

.

ಇದೇ ಸಂದರ್ಭದಲ್ಲಿ ರಾಮಸಾಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ತಿಪ್ಪೇಸ್ವಾಮಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸಣ್ಣ ತಿಪ್ಪಯ್ಯ, ಬಸವರಾಜಪ್ಪ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಿ.ಟಿ.ತಿಪ್ಪೇಸ್ವಾಮಿ, ಅಂಗನವಾಡಿ ಅಧ್ಯಕ್ಷ ಎಸ್ ಬೋರಮ್ಮ, ಗ್ರಾಮದ ಮುಖಂಡ ಸಣ್ಣ ತಿಪ್ಪಯ್ಯ, ಯಶೋದಮ್ಮ ಅಂಗನವಾಡಿ ಶಿಕ್ಷಕಿ ಸರ್ವ ಮಂಗಳಮ್ಮ, ಅಂಗನವಾಡಿ ಸಹಾಯಕಿ ರುದ್ರಮ್ಮ. ಗ್ರಾಮದ ಗರ್ಭಿಣಿ -ಬಾಣತಿಯರು ಮಕ್ಕಳು ಉಪಸ್ಥಿತರಿದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading