ಚಿತ್ರದುರ್ಗಜ.21:
ಹದಿ ಹರೆಯದ ವಯಸ್ಸಿನಲ್ಲಿ ವ್ಯಸನಗಳಿಗೆ ಸಿಲುಕಿ ಯುವಕರು ಕಾನೂನು ಸಂಘರ್ಷಕ್ಕೆ ಒಳಗಾಗುವ ಸಂಗತಿಗಳು ಹೆಚ್ಚಾಗುತ್ತಿವೆ. ಯುವಕರು ಕಾನೂನು ಬಾಹಿರ ಸಂಗತಿಗಳ ಕಡೆ ಗಮನ ಹರಿಸದೆ, ವಿದ್ಯಾಭ್ಯಾಸದ ಕಡೆ ಹೆಚ್ಚಿನ ಒಲವು ತೊರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ರಾಷ್ಟಿçÃಯ ಸೇವಾ ಯೋಜನೆ ಘಟಕ ಸಹಯೋಗದಲ್ಲಿ, ಮಂಗಳವಾರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಷ್ಟಿçÃಯ ಯುವ ದಿನಾಚರಣೆ ಮತ್ತು ಕಾನೂನು ಅರಿವು ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಜನಸಂಖ್ಯೆಯ ಶೇ.29 ರಷ್ಟು ಯುವಜನರಿದ್ದಾರೆ. 15 ರಿಂದ 29 ವರ್ಷದ ಒಳಗಿರುವವರನ್ನು ಯುವಕರು ಎಂದು ಕರೆಯಲಾಗಿತ್ತದೆ. ದೇಶದ ಪ್ರಗತಿ ಹಾಗೂ ಅಭಿವೃದ್ಧಿಗೆ ಯುವಜನರೇ ಮೂಲವಾಗಿದ್ದಾರೆ. ಸ್ವಾಮಿ ವಿವೇಕಾನಂದರು ಶಿಕ್ಷಣ ಯುವಕರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು ಎಂದು ಆಶಯ ವ್ಯಕ್ತಪಡಿಸಿದ್ದರು. ಜ.12 ರಂದು ರಾಷ್ಟಿçÃಯ ಯುವ ದಿನಾಚರಣೆ ಆಚರಿಸಬೇಕಿತ್ತು. ಕಾರಣಾಂತರಗಳಿAದ ಇಂದು ಆಚರಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಜೀವನ ಯುವಕರಿಗೆ ಮಾದರಿ ಹಾಗೂ ಸ್ಪೂರ್ತಿಯಾಗಿದೆ. ಈ ಬಾರಿಯ ಯುವ ದಿನಾಚರಣೆ ಘೋಷವಾಕ್ಯ ಯುವಜನರ ಶಕ್ತಿಯನ್ನು ಸಂಭ್ರಮಿಸೋಣ ಎನ್ನುವುದಾಗಿದೆ. ಯುವಜನರ ಶಕ್ತಿ ಸದ್ಭಳಕೆಯಾದರೆ ಕುಟುಂಬ, ನಾಡು, ದೇಶ ಸುಭೀಕ್ಷವಾಗಲಿದೆ ಎಂದರು.
ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣದ ಆರೋಪದಲ್ಲಿ ಸಿಲುಕಿ ಬಂಧನಕ್ಕೆ ಒಳಗಾದವರ ಪೈಕಿ ಹೆಚ್ಚಿನವರು ಯುವಕರೇ ಆಗಿರುವುದ ರ್ದುದೈವದ ವಿಷಯವಾಗಿದೆ. ಪೋಕ್ಸೋ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಎನ್.ಡಿ.ಪಿ.ಎಸ್ (ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್) ಸೈಬರ್ ಅಪರಾಧ ಹಾಗೂ ಅಪಘಾತಗಳಲ್ಲಿ ಯುವಕರು ಹೆಚ್ಚಿನ ತೊಂದರೆಗೆ ಸಿಲುಕುತ್ತಿದ್ದಾರೆ. ಇಂತಹ ಯುವಕರ ತಂದೆ ತಾಯಿಗಳು ಅಸಾಹಯಕರಾಗಿ ಕೈಕಟ್ಟಿ ಕುಳಿತುಕೊಳ್ಳವ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಕಾನೂನುಗಳ ಅರಿವು ಹೊಂದಿ ಸೂಕ್ಷö್ಮವಾಗಿ ವರ್ತಿಸಬೇಕು. ಚಿತ್ರದುರ್ಗ ಜಿಲ್ಲೆ ಬಾಲ್ಯವಿವಾಹಗಳ ಪ್ರಕರಣಗಳು ಹೆಚ್ಚಿವೆ. ಇದು ಅತ್ಯಂತ ಅಪಮಾನಕರ ಸಂಗತಿಯಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಶಿಕ್ಷಣ, ಮಹಿಳಾ ಮತ್ತು ಕಲ್ಯಾಣ ಇಲಾಖೆ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ನ್ಯಾ.ಎಂ.ವಿಜಯ್ ತಿಳಿಸಿದರು.
ಜಿಲ್ಲಾ ಯುವಜನ ಅಧಿಕಾರಿ ಸುಹಾಸ್.ಎನ್ ಮಾತನಾಡಿ, ಶ್ರೇಷ್ಠ ಆಧ್ಯಾತ್ಮಿಕ ನಾಯಕ ಹಾಗೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು 1863 ಜನವರಿ 12 ರಂದು ಜನಿಸಿದರು. ಆದ್ದರಿಂದ ಈ ದಿನವನ್ನು ರಾಷ್ಟಿçÃಯ ಯುವದಿನವಾಗಿ ಆಚರಿಸಲಾಗುತ್ತಿದೆ. ಯುವ ಜನರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಯುವನರು ಮೊಬೈಲ್ ಗೀಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕಾಲಹರಣ ಮಾಡದೇ ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು. ರೀಲ್ಸ್ನಲ್ಲಿ ಪ್ರಖ್ಯಾತರಾದವರೇ ಆದರ್ಶ ವ್ಯಕ್ತಿಗಳಲ್ಲ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಿದೆ. ಓದುವಾಗಲೇ ವೃತ್ತಿ ಬಗ್ಗೆ ಯೋಚಿಸಿ ಕೌಶಲ್ಯಗಳನ್ನು ಬೆಳಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಎಐ ಹಾಗೂ ಆಟೋಮೇಷನ್ ಲರ್ನಿಂಗ್ ಪ್ರವರ್ಧಮಾನಕ್ಕೆ ಬರಲಿದ್ದು, ಇದರಲ್ಲಿ ಹೆಚ್ಚಿನ ಕೌಶಲ್ಯ ಗಳಿಸಲು ಪ್ರಯತ್ನಿಸುವಂತೆ ವಿದ್ಯಾರ್ಥಿಗಳಿಗೆ ಕಿವಮಾತು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿದಾರ ಗಜೇಂದ್ರ ಎಂ ನಾಯ್ಕ್ ಮಾತನಾಡಿದರು. ಪ್ರಾಂಶುಪಾಲ ರಾಘವೇಂದ್ರಚಾರ್.ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ರಮೇಶ್, ಇತರೆ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



About The Author
Discover more from JANADHWANI NEWS
Subscribe to get the latest posts sent to your email.