ಚಿತ್ರದುರ್ಗ ಫೆ.21:
ಉಗ್ರಾಣದ ಪ್ರತಿಯೊಂದು ಚೀಲದಲ್ಲಿರುವ ಧಾನ್ಯವೂ ಮಗುವಿನ ಆರೋಗ್ಯ, ಶಿಕ್ಷಣ ಮತ್ತು ಭವಿಷ್ಯಕ್ಕೆ ನೇರವಾಗಿ ಸಂಬAಧಿಸಿದೆ. ಆಹಾರ ಸುರಕ್ಷತೆಯಲ್ಲಿ ಯಾವುದೇ ಅಸಡ್ಡೆ ತೋರದೆ ಅಧಿಕಾರಿಗಳು ಸೂಕ್ಷö್ಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.
ನಗರದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಗ್ರಾಣಗಳಿಗೆ ಡಾ.ಕೆ.ಟಿ.ತಿಪ್ಪೇಸ್ವಾಮಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆ ಮತ್ತು ವಸತಿ ನಿಲಯಗಳಿಗೆ ಸರಬರಾಜು ಮಾಡುವ ಆಹಾರವನ್ನು ಸೂಕ್ಷ್ಮ ವಿಭಾಗ ಎಂದು ಪರಿಗಣಿಸಬೇಕು. ಮಕ್ಕಳ ಆಹಾರದ ಗುಣಮಟ್ಟದ ರಾಜಿ ಅಥವಾ ನಿರ್ಲಕ್ಷ್ಯ ಸಲ್ಲದು. ಉಗ್ರಾಣಗಳ ಸ್ವಚ್ಛತೆ, ಧಾನ್ಯ ಸಂಗ್ರಹಣೆ, ಕೀಟ-ಇಲಿ ನಿಯಂತ್ರಣ ಮತ್ತು ಮೊದಲು ಬಂದ ಧಾನ್ಯವನ್ನು ಮೊದಲು ವಿತರಿಸುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಗಳು ಹಾಗೂ ಆಹಾರ ಸುರಕ್ಷತಾ ಕಾಯ್ದೆ-2006 ರ ನಿಯಮಗಳನ್ನು ಪ್ರತಿಯೊಂದು ಹಂತದಲ್ಲೂ ಪಾಲಿಸಬೇಕು. ಹಾನಿಯಾದ ಅಥವಾ ತೇವಾಂಶದಿAದ ಕೂಡಿದ ಆಹಾರ ಪದಾರ್ಥಗಳು ಕಂಡುಬAದಲ್ಲಿ ಕೂಡಲೇ ಅವುಗಳನ್ನು ಪ್ರತ್ಯೇಕಿಸಲು ಕ್ರಮ ಕೈಗೊಳ್ಳಬೇಕು. ಆಹಾರ ಸಂಗ್ರಹಣೆ ಅಥವಾ ವಿತರಣೆಯಲ್ಲಿನ ಲೋಪವು ಮಕ್ಕಳ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಸಮಾನ ಎಂದು ಅವರು ಎಚ್ಚರಿಸಿದರು. ಜಿಲ್ಲೆಯ ಎಲ್ಲಾ ಉಗ್ರಾಣಗಳು ಹಾಗೂ ನ್ಯಾಯಬೆಲೆ ಅಂಗಡಿಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಡಾ.ಕೆ.ಟಿ.ತಿಪ್ಪೇಸ್ವಾಮಿ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಉಗ್ರಾಣ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.