ಚಿತ್ರದುರ್ಗಅ.21:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ವ್ಯಕ್ತಿಗಳು ಕಾಣೆಯಾದ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಹೊಳಲ್ಕೆರೆ ತಾಲ್ಲೂಕಿನ ಮದ್ದೇರು ಗ್ರಾಮದ ನಿವಾಸಿ ವೇಣು ಪೃಥ್ವಿ ತಂದೆ ದ್ಯಾಮಪ್ಪ (ಸು.17 ವರ್ಷ) 2024ರ ಸೆ.23ರಂದು ಕಾಣೆಯಾದ ಕುರಿತು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವೇಣು ಪೃಥ್ವಿ 5.5 ಅಡಿ ಎತ್ತರ, ದುಂಡು ಮುಖ, ಗೋದಿ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು ಮತ್ತು ತೆಲುಗು ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ನೈಟ್ ಪ್ಯಾಂಟ್, ಕಪ್ಪು ಬಣ್ಣದ ಟೀ ಶರ್ಟ್ ಧರಿಸಿರುತ್ತಾರೆ.
ಹೊಳಲ್ಕೆರೆ ತಾಲ್ಲೂಕಿನ ಕಣಿವೆ ಜೋಗಿಹಳ್ಳಿ ಗ್ರಾಮದ ಮೇಘಶ್ರೀ ತಂದೆ ಲಕ್ಷ್ಮಣ (ಸು.17ವರ್ಷ) ಎಂಬ ಯುವತಿ 2024ರ ಸೆ.30ರಂದು ಕಾಣೆಯಾದ ಕುರಿತು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾದ ಮೇಘಶ್ರೀ ಸು.5 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮಾತನಾಡುವರು. ಕುತ್ತಿಗೆಯ ಹಿಂಭಾಗದಲ್ಲಿ ಕಪ್ಪು ಮಚ್ಚೆ ಇರುತ್ತದೆ. ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ.
ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಗ್ರಾಮದ ಸುಶ್ಮಿತ ಎಸ್ ತಂದೆ ಸತೀಶ (ಸು.15 ವರ್ಷ) ಯುವತಿ ಕಾಣೆಯಾದ ಕುರಿತು 2024ರ ಅ.12ರಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಎಸ್. ಸುಶ್ಮಿತ ಸು. 4.5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್, ಗೋಲ್ಡ್ ಕಲರ್ ಫ್ಯಾಂಟ್ ಧರಿಸಿರುತ್ತಾರೆ.
ಮೇಲ್ಕಂಡ ವ್ಯಕ್ತಿಗಳ ಕುರಿತು ಮಾಹಿತಿ ಕಂಡುಬಂದಲ್ಲಿ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.