ನಾಯಕನಹಟ್ಟಿ ಅ.22 ನಾಯಕನಹಟ್ಟಿ ಪಟ್ಟಣದ ಚಿಕ್ಕಕೆರೆ ಕೋಡಿ ಬಿದ್ದಿದ್ದರಿಂದ ಜಿಲ್ಲಾಧಿಕಾರಿಟಿ ವೆಂಕಟೇಶ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

























ನಂತರ ಕೋಡಿ ನೀರು ಅರಿಯುವ ಜಾಗದ ಅಕ್ಕ ಪಕ್ಕದಲ್ಲಿರುವ ಅಂಗಡಿ, ಶೆಡ್ಡುಗಳನ್ನು, ಮನೆಗಳನ್ನು ತೆರುಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು. ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ. ದೇವಸ್ಥಾನದ ಒಳಗಡೆ, ದೇವಸ್ಥಾನದ ಸುತ್ತಲೂ ಕೋಡಿ ನೀರು ಹರಿದಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಉಪಸ್ಥಿತರಾದ ಚಳ್ಳಕೆರೆ ತಸಿಲ್ದಾರ್ ರೆಹನ್ ಪಾಷಾ, ವೃತ ನಿರೀಕ್ಷಕ ಹನುಮಂತಪ್ಪ ಎಸ್ ಶಿರೇಹಳ್ಳಿ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ರವಿಕುಮಾರ್, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಎಚ್ ಗಂಗಾಧರಪ್ಪ, ಗ್ರಾಮದ ಮುಖಂಡರಾದ ಕಾವಲಪ್ಪರ ತಿಪ್ಪೇರುದ್ರಪ್ಪ,ಪ,ಪಂ ಮುಖ್ಯ ಅಧಿಕಾರಿ ಓ ಶ್ರೀನಿವಾಸ್, ಪ,ಪಂ ಮಾಜಿ ಸದಸ್ಯ ಶ್ರೀಕಾಂತ್,ಪ,ಪಂ ಮಾಜಿ ಸದಸ್ಯ ಹಾಗೂ ವಕೀಲರಾದ ಉಮಾಪತಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ ಎಂ ಶಿವಸ್ವಾಮಿ, ಕರವೇ ಹೋಬಳಿ ಅಧ್ಯಕ್ಷ ಮುತ್ತಯ್ಯ, ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು, ಹಾಗೂ ಇನ್ನು ಮುಂತಾದವರು ಹಾಜರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.