September 16, 2025
IMG-20241122-WA0096.jpg

ವರದಿ ಎಂ.ಶಿವಮೂರ್ತಿ
ನಾಯಕನಹಟ್ಟಿ : ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಐ ಕೆ ಶಿವಕುಮಾರ್ ರವರಿಗೆ ಆರನೇ ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಡ 2024ರಲ್ಲಿ ವೈದ್ಯಕೀಯ ಕಾನೂನು ಮೌಖಿಕ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ನಾನಾ ಭಾಗಗಳಿಂದ ಭಾಗವಹಿಸಿದ ಸಿಬ್ಬಂದಿಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಕೆ ಶಿವಕುಮಾರ್ ವೈದ್ಯಕೀಯ ಕಾನೂನು ಮೌಖಿಕ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಂಡಿರುವುದು ಸಂತಸವಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಕೆಲಸಗಳನ್ನು ಮಾಡುತ್ತಾ, ಉತ್ತಮ ಪ್ರಶಸ್ತಿಗಳನ್ನು ಪಡೆದುಕೊಳ್ಳಲಿ ಎಂದು ಪಿ ಎಸ ಐ ದೇವರಾಜ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್, ಉಪಾಧ್ಯಕ್ಷ ಸರ್ವ ಮಂಗಳ ಉಮಾಪತಿ, ಸರ್ವ ಸದಸ್ಯರುಗಳು, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಓ ಶ್ರೀನಿವಾಸ್ , ಪಟ್ಟಣ ಪಂಚಾಯತಿ ಸಿಬ್ಬಂದಿ ವರ್ಗದವರು,ಮತ್ತು ಪಟ್ಟಣದ ಮುಖಂಡರುಗಳು ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು, ವಿವಿಧ ಸಂಘಟನೆಗಳು ಶುಭ ಹಾರೈಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading