ಚಳ್ಳಕೆರೆ:ಹಳೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ವೃತ್ತಿ, ಅನುಭವಗಳನ್ನು ಹೊಸ ವಿದ್ಯಾರ್ಥಿಗಳಿಗೆ ದಾರೆ ಎರೆದಾಗ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಮೊದಲ ಹೆಜ್ಜೆಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಕಿವಿಮಾತು ಹೇಳಿದರು.
ತಾಲೂಕಿನ ಕೆ ಡಿ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಉದ್ಘಾಟನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಹಳೆಯ ವಿದ್ಯಾರ್ಥಿಗಳಿಗೆ ಸಂಸ್ಕೃತಿ, ಸಂಸ್ಕಾರ ಆಚಾರ ವಿಚಾರ ಹಾಗೂ ಸಾಮಾಜಿಕ ನೈತಿಕತೆ ಬಗ್ಗೆ ಹೆಚ್ಚು ಕಾಳಜಿ ಇತ್ತು, ಬದಲಾದ ಕಾಲಘಟ್ಟದಲ್ಲಿ ಇವು ಮಾಯವಾಗುತ್ತಿದ್ದು ಹಳೆಯ ಬೇರು ಹೊಸ ಚಿಗುರು ಒಂದಾಗಿ ಮತ್ತೆ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ನಮ್ಮಿಂದ ಶಿಕ್ಷಣ ಪಡೆದವರು ಎಂದು ಸಮಾಜದ ದೊಡ್ಡ ದೊಡ್ಡ ಹುದ್ದೆಗಳಲ್ಲಿ ಇದ್ದಾರೆ ಎನ್ನುವುದು ಗುರುವಿಗೆ ಸಿಗುವ ದೊಡ್ಡ ಗೌರವ ಎಂದು ತಿಳಿಸಿದರು.
ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಮಾತನಾಡಿ ಹಳೆ ವಿದ್ಯಾರ್ಥಿಗಳು ತಮಗೆ ಶಿಕ್ಷಣ ಭೋದಿಸಿದ ಶಿಕ್ಷಕರನ್ನು ಮರೆಯದೆ ಇಂದು ಸ್ನೇಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ವಿಚಾರವಾಗಿದೆ ಸರ್ಕಾರ ಪ್ರತಿಯೊಬ್ಬರಿಗೂ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ ಸರ್ಕಾರಿ ಶಾಲೆಯ ಮಕ್ಕಳು ಇಂತಹ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಮೌಲ್ಯಯುತ ಜೀವನ ಪಾಠವನ್ನು ಕಲಿಸುವುದು ಕೇವಲ ಶಿಕ್ಷಕರ ಜವಾಬ್ದಾರಿ ಎಂದು ಭಾವಿಸದೆ ಪೋಷಕರು ಇದರ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೇಣುಕಾಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಶಿಧರ್ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷೆ ಸಣ್ಣಸೂರಮ್ಮ,ರೇಣುಕಾಪುರ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ತಿಪ್ಪೇಸ್ವಾಮಿ ಬಿ ಯು,ಕೆ.ಡಿ ಕೋಟೆ ಮುಖ್ಯ ಶಿಕ್ಷಕಿ ಜಯಮ್ಮ ಎಸ್ ಡಿ ಎಂ ಸಿ ಅಧ್ಯಕ್ಷರಾದ ನಾಗೇಶ್ ಗ್ರಾಮ ಪಂಚಾಯತಿ ಸದಸ್ಯರು,ಹಳೇ ವಿದ್ಯಾರ್ಥಿಗಳ ಸಂಘದ ಗೌರವಧ್ಯಕ್ಷರಾದ ನಾಗರಾಜ್ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು, ಪೋಷಕರು,ಮಕ್ಕಳು ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.