ಹಿರಿಯೂರು ತಾಲ್ಲೂಕಿನ ಮಸ್ಕಲ್ ಮಟ್ಟಿ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳ ಪ್ರಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸ್ಕಲ್ ಗ್ರಾಮ ಪಂಚಾಯಿತಿ ಸದಸ್ಯರಾದ ಗಿರಿಜಮ್ಮ ಅವರು ವಹಿಸಿದ್ದರು.








ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ಮಾಜಿ ಉಪಾಧ್ಯಕ್ಷರಾದ ನಾಗರಾಜ್ ವೈ. ಅವರು ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿಯಾದ ಕೆ. ಜ್ಯೋತಿ ಅವರು ಮಕ್ಕಳ ಶಿಕ್ಷಣದ ಮಹತ್ವ ಕುರಿತು ಮಾಹಿತಿ ನೀಡಿ ಮಾರ್ಗದರ್ಶನ ನೀಡಿದರು. ಅಂಗನವಾಡಿ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ ವೀಣಾ ಹಾಗೂ ನಂದಿನಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಸ್ಕಲ್ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಶಿಕ್ಷಕಿಯರಾದ ಎಲ್. ಗೀತಮ್ಮ, ಟಿ. ಮಲ್ಲಿಕಾ, ಜಿ. ಪವಿತ್ರಮ್ಮ, ಕರಿಯಮ್ಮ, ಸಿ. ನಳಿನಾಕ್ಷಿ, ವಿ. ಶುಭ, ಮಂಗಳ, ದೇವಿರಮ್ಮ, ಸೌಮ್ಯ, ಲಕ್ಷ್ಮೀದೇವಿ ಹಾಗೂ ಪುಟ್ಟರಂಗಮ್ಮ ಅವರುಗಳು ಭಾಗವಹಿಸಿದ್ದರು. ಆಶಾ ಕಾರ್ಯಕರ್ತರಾದ ಹೇಮಲತಾ ಹಾಗೂ ಸಿ. ಬೇಬಿ, ಸಹಾಯಕಿಯರಾದ ಕವಿತಾ ಮತ್ತು ರಾಜೇಶ್ವರಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮಕ್ಕಳ ಪೋಷಕರು ಹಾಗೂ ಸಲಹಾ ಸಮಿತಿಯ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಯಶಸ್ಸು ತಂದರು.
About The Author
Discover more from JANADHWANI NEWS
Subscribe to get the latest posts sent to your email.