January 29, 2026
IMG-20260123-WA0282.jpg

ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿಶೇಷ ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲಾಗಿತ್ತು. ಮಕ್ಕಳ ಧ್ವನಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಗ್ರಾಮಸಭೆ ನಡೆಸಲಾಯಿತು.ಗ್ರಾಮಸಭೆಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರ್, ಗ್ರಾಮಪಂಚಾಯಿತಿ ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಪಿಡಿಒ ಶಶಿರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಭೆಯ ಸಂದರ್ಭದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ, ಸ್ವಚ್ಛತೆ, ಕುಡಿಯುವ ನೀರು, ಆಟದ ಸೌಲಭ್ಯಗಳು ಸೇರಿದಂತೆ ಮಕ್ಕಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ ನಡೆಯಿತು. ಮಕ್ಕಳು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮುಕ್ತವಾಗಿ ಮಂಡಿಸಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನವಿಟ್ಟು ಆಲಿಸಿದರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಇಂತಹ ಮಕ್ಕಳ ಗ್ರಾಮಸಭೆಗಳು ಸಹಕಾರಿಯಾಗುತ್ತವೆ ಎಂದು ಗ್ರಾಮಪಂಚಾಯಿತಿ ಅಧ್ಯಕ್ಷ ಅರುಣ್ ಕುಮಾರ್ ಅವರು ತಿಳಿಸಿದರು. ಮುಂದಿನ ದಿನಗಳಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಈ ವಿಶೇಷ ಮಕ್ಕಳ ಗ್ರಾಮಸಭೆ ಪ್ರಮುಖ ಪಾತ್ರ ವಹಿಸಿತು ಎಂದು ಪಾಲ್ಗೊಂಡವರು ಅಭಿಪ್ರಾಯಪಟ್ಟರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading