ಚಿತ್ರದುರ್ಗಫೆ.23:
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಫೆ.25 ರಿಂದ 26 ರವರೆಗೆ ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು, ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ ಪೋರ್ಟ್ ಸೈಜ್ ಪೊಟೋ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111, 9886002248ಗೆ ಸಂಪರ್ಕಿಸಲು ಕೋರಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾವಣಿ ಮಾಡಿಕೊಳ್ಳಬೇಕು ಎಂದು ಚಿತ್ರದುರ್ಗ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
===========
About The Author
Discover more from JANADHWANI NEWS
Subscribe to get the latest posts sent to your email.