January 29, 2026
IMG-20260124-WA0152.jpg

ಪರಶುರಾಂಪುರದಲ್ಲಿ ಪಂಪ್ ಮೋಟಾರ್ ವಿತರಣಾ ಕಾರ್ಯಕ್ರಮ – ಶಾಸಕ ಟಿ. ರಘುಮೂರ್ತಿ ಭಾಗಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ. ರಘುಮೂರ್ತಿ ಅವರು ಇಂದು ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಆಯೋಜಿಸಲಾದ ಪಂಪ್ ಮೋಟಾರ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
2025–26ನೇ ಸಾಲಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆಯಡಿ ಕೊಳವೆ ಬಾವಿ ಕೊರೆಸಿಕೊಂಡ ಫಲಾನುಭವಿಗಳಿಗೆ ಪಂಪ್ ಮೋಟಾರ್‌ಗಳು ಹಾಗೂ ಇತರೆ ಅಗತ್ಯ ಸಲಕರಣೆಗಳನ್ನು ವಿತರಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ರೈತರ ಆರ್ಥಿಕ ಅಭಿವೃದ್ಧಿಗೆ ಇಂತಹ ಯೋಜನೆಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾದ ಅಣ್ಣಪ್ಪ, ರವಿಕುಮಾರ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುದ್ರೇಶ್, ಪಂಚಾಯತ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರಾದ ನಾಗೇಶ್, ಪ್ರಕಾಶ್, ನಾಗಭೂಷಣ, ವಾಲ್ಮೀಕಿ, ರಂಗಸ್ವಾಮಿ, ಸಂಪತ್ ಕುಮಾರ್, ಮಂಜುನಾಥ್, ಅನಿಲ್, ಜಗಳೂರು ಸ್ವಾಮಿ, ವೀರೇಶ್, ನಾಗರಾಜ ಸೇರಿದಂತೆ ಹಲವಾರು ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading