January 29, 2026
IMG-20250425-WA0179.jpg

ಚಳ್ಳಕೆರೆ: ಡಾ.ಬಿ ಆರ್ ಅಂಬೇಡ್ಕರ್ ಅವರು ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಅಂಬೇಡ್ಕರ್ ಸಮಾನತೆ ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಪೂರ್ತಿ ಅವರ ಆದರ್ಶ ಎಲ್ಲರ ಜೀವನಕ್ಕೆ ದಾರಿ ದೀಪವಾಗಿದೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು. 

ನಗರದ ಅಭಿಷೇಕ್ ನಗರದಲ್ಲಿ ಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಕರ್ನಾಟಕ, ದಲಿತ  ಸಂಘರ್ಷ ಸಮಿತಿ ಮತ್ತು ಮಹಾನಾಯಕ ಯುವಕ ಸಂಘ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ರವರ ಮತ್ತು ಡಾ. ಬಾಬು ಜಗಜೀವನ್ ರಾಮ್ ರವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಎಲ್ಲರನ್ನೂ ಸಮಾನವಾಗಿ ಕಾಣುವ ಸಮಾಜದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರು ಅಂಬೇಡ್ಕರ್ ಶೋಷಿತರು ಕಾರ್ಮಿಕರು ಮಹಿಳೆಯರ ಉನ್ನತಿಗೆ ಹೋರಾಡಿದ ಅಸಹಾಯಕರ ಧ್ವನಿಯಾದ ಸಮಾನತೆಯ ಕನಸು ಕಂಡ ಎಲ್ಲರ ಬದುಕಿಗೆ ಸ್ಪೂರ್ತಿಯಾದ ಈ ಮಹಾನ್ ನಾಯಕರ ಕೊಡುಗೆಯನ್ನು ಸದಾ ನಾವೆಲ್ಲರೂ ಸ್ಮರಿಸಬೇಕು ಎಂದರು 

ವಿದೇಶಗಳಿಂದ ಆಹಾರ ಧಾನ್ಯಗಳನ್ನು ರಫ್ತು ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ದೇಶದಲ್ಲಿ ಹಸಿರು ಕ್ರಾಂತಿಯನ್ನು ಹುಟ್ಟು ಹಾಕಿದ ದೇಶದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ದೂರದೃಷ್ಟಿಯಿಂದ ದೇಶದ ಎಲ್ಲಾ ವರ್ಗದ ಜನರು ಇಂದು ನೆಮ್ಮದಿಯಿಂದ ಊಟ ಮಾಡುವಂತಾಗಿದೆ ಎಂದರು. 

ಸಂಸದ ಗೋವಿಂದ ಎಂ ಕಾರಜೋಳ ಮಾತನಾಡಿ ಅಂಬೇಡ್ಕರ್ ಜಯಂತಿಯನ್ನು ವಿಶ್ವಸಂಸ್ಥೆ, ವಿಶ್ವದ ಜ್ಞಾನದ ದಿನವನ್ನಾಗಿ ಆಚರಣೆ ಮಾಡುತ್ತಿರುವುದು ಒಳ್ಳೆಯ ಸಂಗತಿಯಾಗಿದೆ ತಮ್ಮ ಜೀವನ ಪೂರ್ತಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ಬಿ ಆರ್ ಅಂಬೇಡ್ಕರ್ ರವರು ಶಿಕ್ಷಣ ಸಂಘಟನೆ ಹೋರಾಟ ಅವರ ಮೂಲ ಗುಣವಾಗಿತ್ತು ಭಾರತೀಯರ ಸಂಪ್ರದಾಯವೆಂಬ ಅಸಮಾನತೆ ಬೆಂಕಿಯಲ್ಲಿ ಅರಳಿದ ಹೂವು ಡಾ. ಬಿ ಆರ್ ಅಂಬೇಡ್ಕರ್ ಬದುಕು ಬರಹ ಓದಿದರೆ ಯುವಕರು ಉತ್ತಮ ಪ್ರಜೆಗಳಾಗಲು ಸಾಧ್ಯವಿದೆ ಜಗತ್ತು ಮೆಚ್ಚಿರುವ ಸಮಾಜದ ಸ್ವಾಸ್ಥ್ಯವನ್ನು ರಕ್ಷಿಸುವ ಗ್ರಂಥ ಸಂವಿಧಾನವನ್ನು ಎಲ್ಲರೂ ಗೌರವಿಸಲೇಬೇಕು ಅಂಬೇಡ್ಕರ ಸಂವಿಧಾನ ಭಾರತೀಯರೆಲ್ಲರಿಗೂ ತಾಯಿ ಇದ್ದಂತೆ ಕಾನೂನನ್ನು ಗೌರವಿಸಿದರೆ ಅಂಬೇಡ್ಕರ್ ಅವರನ್ನು ಗೌರವಿಸಿದಂತೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂವಿಧಾನವನ್ನು ಓದಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮಂಜುಳಾ ಆರ್ ಪ್ರಸನ್ನಕುಮಾರ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಬಿಜೆಪಿ ಮುಖಂಡರಾದ ಕೆ ಟಿ ಕುಮಾರಸ್ವಾಮಿ ಬಾಳೆಕಾಯಿ ರಾಮದಾಸ್  ಡಿ.ಎಸ್.ಎಸ್. ಸಘಂಟನೆಯ ಅಧ್ಯಕ್ಷರಾದ ವಿಜಯಕುಮಾರ್, ಮುಖಂಡರುಗಳಾದ ಹೊನ್ನೂರು ಸ್ವಾಮಿ, ಕೊಟ್ರೇಶ್, ಚಂದ್ರು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading