June 26, 2025
1750858696179.jpg


ಹಿರಿಯೂರು:
ಪ್ರತಿಯೊಂದು ಗ್ರಾಮ ಮತ್ತು ವಾರ್ಡ್ ಗಳ ಮಟ್ಟದಲ್ಲಿ ಹೊಸ ಬೀಟ್ ವ್ಯವಸ್ಥೆ ಇದರಿಂದಾಗಿ ಸ್ಥಳೀಯ ಚಟುವಟಿಕೆಗಳ ಮಾಹಿತಿ ಸಂಗ್ರಹಿಸಬಹುದು. ಬೀಟ್ ಸದಸ್ಯರು,ಸಾರ್ವಜನಿಕರು ಬೀಟ್ ಪೊಲೀಸರಿಗೆ ಮಾಹಿತಿ ನೀಡಿ ಪ್ರತಿಯೊಂದು ಅಪರಾಧ ಚಟುವಟಕೆಗಳನ್ನು ಪತ್ತೆಹಚ್ಚಲು ಬೀಟ್ ವ್ಯವಸ್ಥೆಯಿಂದ ಮಾತ್ರ ಸಾಧ್ಯ ಎಂಬುದಾಗಿ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಹೇಳಿದರು.
ನಗರದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಿತ್ರದುರ್ಗ ಜಿಲ್ಲಾ ಪೊಲೀಸ್ ಬೀಟ್ ಸದಸ್ಯರ ಹಾಗೂ ಸಾರ್ವಜನಿಕರ ಸಂಪರ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಸಂಚಾರ, ಗಾಂಜಾ, ಅಫೀಮು ಸೇವನೆ, ಮಾರಾಟ, ಅಪರಾಧ ಮನಸ್ಥಿತಿಗಳ ಸಮಗ್ರ ಮಾಹಿತಿ ಇದರಿಂದ ಲಭ್ಯ. ಠಾಣೆಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ನಾಗರೀಕರು ಸಮವಸ್ತ್ರ ಇಲ್ಲದೆ ಪೊಲೀಸರಾಗಬೇಕು. ಇಂತಹ ಸಾರ್ವಜನಿಕ ಸಭೆಗಳಲ್ಲಿ ವ್ಯಕ್ತವಾಗುವ ಸಮಸ್ಯೆಗಳಿಗೆ ಇಲಾಖೆಯಿಂದ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂಬುದಾಗಿ ಅವರು ಹೇಳಿದರು.
ಡಿ.ವೈ.ಎಸ್ಪಿ.ಈಶ್ವರ್ ನಾಯಕ್ ಅವರು ಮಾತನಾಡಿ ನಾಗರೀಕ ಸಮಾಜ ಶಾಂತಿ ಸುವ್ಯವಸ್ಥೆಯಿದ ಇರಲು ಪೊಲೀಸ್ ಇಲಾಖೆ ಆಗಾಗ ಹೊಸ ವ್ಯವಸ್ಥೆಗಳನ್ನು ಜಾರಿ ಮಾಡಬೇಕು. ಪೊಲೀಸ್ ಇಲಾಖೆಯನ್ನು ಆದಷ್ಟು ಜನರ ಹತ್ತಿರ ಕೊಂಡೊಯ್ಯಲು ಪ್ರಯತ್ನ ಮಾಡಬೇಕು. ಬೀಟ್ ವ್ಯವಸ್ಥೆಯಿಂದ ಸಿಬ್ಬಂದಿಗಳ ಕಾರ್ಯಾಚರಣೆಯ ಬಗ್ಗೆ ಇಲಾಖಾಧಿಕಾರಿಗಳಿಗೆ ಮಾಹಿತಿ ಸಾಧ್ಯ ಎಂಬುದಾಗಿ ಅವರು ಹೇಳಿದರು.
ಡಿ.ವೈ.ಎಸ್ಪಿ.ಟಿ.ಎಂ.ಶಿವಕುಮಾರ್ ಅವರು ಮಾತನಾಡಿ ಯಾವುದೇ ಕೆಲಸ ಮಾಡುವಾಗ ಜಾಗೃತಿ ಮುಖ್ಯ . ಸಾರ್ವಜನಿಕರಿಗೆ ಅರಿವು ಮೂಡಿಸುವುದರಿಂದ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಬಹುದು. ಬೀಟ್ ವ್ಯವಸ್ಥೆಯಿಂದ ಸಂಗ್ರಹಿಸಿದ ಮಾಹಿತಿಯನ್ನು ಮೇಲಾಧಿಕಾರಿಗಳ ಸೂಕ್ತ ಮಾರ್ಗದರ್ಶನದಿಂದ ಪರಿಹಾರ ಕಂಡುಕೊಳ್ಳಬಹುದು ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕರಾದ ರಾಘವೇಂದ್ರಕಾಂಡಿಕೆ, ಆನಂದ್, ವೃತ್ತ ನಿರೀಕ್ಷಕರಾದ ಗುಡ್ಡಪ್ಪ, ವೆಂಕಟೇಶ್, ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು , ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading