June 26, 2025
1750858801301.jpg


ಹಿರಿಯೂರು:
ಕರ್ನಾಟಕ ಹೈಕೋರ್ಟ್ ಪ್ರಧಾನ ಪೀಠದಿಂದ ನ್ಯಾಯಲಯದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಬೇಕಬೇಕೆಂಬ ಆದೇಶ ಆಗಿದ್ದು, ಈ ಆದೇಶ ಸ್ವಾಗತಾರ್ಹ ವಿಚಾರವಾಗಿದೆ ಎಂಬುದಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಕೆ.ರಾಮಚಂದ್ರ ಅವರು ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್ ನ ಪ್ರಧಾನ ಪೀಠ ಧಾರವಾಡ ಮತ್ತು ಕಲಬುರ್ಗಿಪೀಠ ಸೇರಿ ರಾಜ್ಯದ ಎಲ್ಲಾ ಕೋರ್ಟ್ ಹಾಲ್ ಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಬೇಕು ಎಂದು ಸೂಚಿಸಿ ಹೈಕೋರ್ಟ್ ರಿಜಿಸ್ಟರ್ ಜನರಲ್ ನೋಟಿಫಿಕೇಶನ್ ಹೊರಟಿಸಿದ್ದಾರೆ.
ರಾಜ್ಯದ ಹೈಕೋರ್ಟ್ ನ 3 ಪೀಠಗಳ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ (ಕೋರ್ಟ್ ಹಾಲ್) ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಾಕಬೇಕು ಎಂದು ಸಾರ್ವಜನಿಕರು ಮತ್ತು ವಕೀಲರು ವಿವಿಧ ಸಂಘ ಸಂಸ್ಥೆಗಳು ಒಟ್ಟಾಗಿ ಮನವಿ ಸಲ್ಲಿಸಲಾಗಿತ್ತು.
ಈ ವಿಚಾರವಾಗಿ ರಾಜ್ಯ ಸರ್ಕಾರ ಕಾಲಕಾಲಕ್ಕೆ ಪತ್ರ ಬರೆದಿತ್ತು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಹಾಗೂ 2025ರ ಏಪ್ರಿಲ್ 26ರಂದು ನಡೆದ ಹೈಕೋರ್ಟ್ ನ ಎಲ್ಲಾ ನ್ಯಾಯಮೂರ್ತಿಗಳ (ಫುಲ್ ಕೋರ್ಟ್) ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಅಂಬೇಡ್ಕರ್ ಅವರ ಭಾವಚಿತ್ರ ಹಾಕಬೇಕು ಎಂದು ಸೂಚಿಸಿ ರಿಜಿಸ್ಟರ್ ಜನರಲ್ ಕೆ.ಎಸ್. ಭರತ್ ಕುಮಾರ್ ನೋಟಿಫಿಕೇಷನ್ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರು ಕಳೆದ 2022ರ ಜನವರಿ 26ರಂದು ಅಂಬೇಡ್ಕರ್ ರವರ ಫೋಟೋ ತೆಗೆದರೆ ಮಾತ್ರ ನಾನು ಧ್ವಜಾರೋಹಣ ಮಾಡುವುದು ಎಂದು ಹೇಳಿ ಬಾಬಾಸಾಹೇಬರಿಗೆ ಅಪಮಾನ ಮಾಡಿದ್ದರು. ಇವರ ವಿರುದ್ಧ 2022ರ ಫೆಬ್ರವರಿ 19ರಂದು ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನೆ ಮಾಡಲಾಗಿತ್ತು.
ಅನೇಕ ಸಂಘಟನೆಗಳ ಮುಖಂಡರುಗಳು ಮತ್ತು ನಾಯಕರುಗಳು ಮತ್ತು ಕಾರ್ಯಕರ್ತರಿಗೆ ಆ ಪ್ರತಿಭಟನೆಯ ಫಲ ದೊರಕಿದೆ ಎಂಬುದಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಕೆ.ರಾಮಚಂದ್ರ ಅವರು ಅಭಿಪ್ರಾಯಪಟ್ಟಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading