ಹೊಸದುರ್ಗ, ಜೂನ್ 25: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ದೊಡ್ಡ ಕಿಟ್ಟದಹಳ್ಳಿ ಗ್ರಾಮದಲ್ಲಿ ಮೈಕ್ರೋಲ್ಯಾಂಡ್ ಫೌಂಡೇಷನ್ (MLF) ಹಾಗೂ ಟೆಕ್ನಾಲಜಿ ಇನ್ಫಾರ್ಮೇಟಿಕ್ಸ್ ಡಿಸೈನ್ ಎಂಡೋವರ್ (TIDE) ಸಂಸ್ಥೆಗಳ ಸಹಯೋಗದಲ್ಲಿ ಗ್ರಾಮೀಣ ಜನರಲ್ಲಿ ಡಿಜಿಟಲ್ ಸೇವೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಡಿಜಿಟಲ್ ಅರಿವು ಶಿಬಿರವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ದೊಡ್ಡ ಕಿಟ್ಟದಹಳ್ಳಿ, ಸಣ್ಣಕಿಟ್ಟದಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನರು ಭಾಗವಹಿಸಿದರು. ಶಿಬಿರದಲ್ಲಿ ಲೇಬರ್ ಕಾರ್ಡ್, ಇ-ಶ್ರಮ್ (e-Shram) ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್ ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ಅಲ್ಲದೆ, ಸುಮಾರು 200ಕ್ಕೂ ಹೆಚ್ಚು ಜನರಿಗೆ ಸ್ಥಳದಲ್ಲೇ ಆಯುಷ್ಮಾನ್ ಭಾರತ್ ಕಾರ್ಡ್ಗಳನ್ನು ಡೌನ್ಲೋಡ್ ಮಾಡಿ ವಿತರಿಸಲಾಯಿತು.
ವಿಶೇಷವಾಗಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಶಿಬಿರದ ಹೆಚ್ಚಿನ ಪ್ರಯೋಜನ ಪಡೆದುಕೊಂಡರು. ಗ್ರಾಮಸ್ಥರಿಗೆ ವಿವಿಧ ಸರ್ಕಾರಿ ಯೋಜನೆಗಳು, ಡಿಜಿಟಲ್ ಸೇವೆಗಳು ಹಾಗೂ ಭವಿಷ್ಯದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮಾಹಿತಿ ನೀಡಲಾಯಿತು.
ಇದೇ ವೇಳೆ ಡಿಜಿಟಲ್ ವಹಿವಾಟು, ಆನ್ಲೈನ್ ಸೇವೆಗಳ ಬಳಕೆ ಹಾಗೂ ಸೈಬರ್ ಸುರಕ್ಷತೆ ಕುರಿತೂ ಜಾಗೃತಿ ಮೂಡಿಸಲಾಯಿತು. ಗ್ರಾಮೀಣ ಪ್ರದೇಶದ ಜನರಿಗೆ ಡಿಜಿಟಲ್ ಸೇವೆಗಳ ಮಹತ್ವವನ್ನು ತಿಳಿಸುವಲ್ಲಿ ಈ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸಿತು.
ಕಾರ್ಯಕ್ರಮವನ್ನು ಮೆಚ್ಚಿದ ಗ್ರಾಮಸ್ಥರು, ಇಂತಹ ಜನೋಪಯೋಗಿ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿಯೂ ಆಯೋಜಿಸುವಂತೆ ಸಂಸ್ಥೆಗಳಿಗೆ ಮನವಿ ಮಾಡಿದರು.
About The Author
Discover more from JANADHWANI NEWS
Subscribe to get the latest posts sent to your email.