August 1, 2025
IMG-20250725-WA0175.jpg

ವರದಿ: ಕೆ.ಟಿ. ಓಬಳೇಶ್ ನಲಗೇತನಹಟ್ಟಿ.

ನಾಯಕನಹಟ್ಟಿ:: ಪೋಷಕರು ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ಉತ್ತಮ ಸಂಸ್ಕಾರ ಕಲಿಸಿದಾಗ ಮಾತ್ರ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬೆಳೆಯಲು ಸಾಧ್ಯ ಎಂದು ಶ್ರೀ ಮೂಗಬಸವೇಶ್ವರ ಹೈಟೆಕ್ ಶಾಲೆಯ ಕಾರ್ಯದರ್ಶಿ ಕೆ.ಆರ್. ತಿಪ್ಪೇಸ್ವಾಮಿ ಹೇಳಿದರು.

ಶುಕ್ರವಾರ ಹೋಬಳಿಯ ಮಲ್ಲೂರಹಳ್ಳಿ ಗ್ರಾಮದ ಶ್ರೀ ರಾಜಲಿಂಗ ಸ್ವಾಮಿ ಎಸ್ ಸಿ/ ಎಸ್ ಟಿ ವಿದ್ಯಾ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಗಳೂರು ವತಿಯಿಂದ ಶ್ರೀ ಮೂಗಬಸವೇಶ್ವರ ಹೈಟೆಕ್ ಶಾಲೆಯಲ್ಲಿ ಅಕ್ಷರಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬ ಪೋಷಕರು ತಮ್ಮ ಮನೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ಉತ್ತಮ ಸಂಸ್ಕಾರವನ್ನು ಕಳಿಸಿ ಮನೆ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಎನ್ನುವಂತೆ ಪೋಷಕರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸಾಕು ಎಂದರು.

ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಗೀತಾ, ಶಿಕ್ಷಕ ಪಾಲಾಕ್ಷ, ಸಹ ಶಿಕ್ಷಕಿರಾದ ಶಿಲ್ಪ, ಜ್ಯೋತಿ, ವಿಜಯಲಕ್ಷ್ಮಿ, ಚಂದನ, ಪೋಷಕರು ವಿದ್ಯಾರ್ಥಿ – ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading