
ವರದಿ ಕೆ.ಟಿ. ಓಬಳೇಶ್ ನಲಗೇತನಹಟ್ಟಿ.
ನಾಯಕನಹಟ್ಟಿ:: ನಾಯಕನಹಟ್ಟಿ ಮತ್ತು ತಳಕು ಹೋಬಳಿಯ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ವತಿಯಿಂದ ರೇಖಲಗೆರೆ. ಉಳ್ಳಾರ್ತಿ. ಗೌರಸಮುದ್ರ, ದೇವರಹಳ್ಳಿ, ಪಗಡಲ ಬಂಡೆ, ರೇಣುಕಾಪುರ, ತಳಕು, ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮೀಣಾಭಿವೃದ್ಧಿ ವಿದ್ಯಾ ಸಂಸ್ಥೆಯಲ್ಲಿ ಸೋಮವಾರ ಶಾಲಾ ಆವರಣದಲ್ಲಿ ತೋಟಗಾರಿಕಾ ಬೆಳೆಗಳಾದ ಮಾವು.ಚಿಕ್ಕು,ಸಿಬೆ, ಹೀಗೆ ಮೂರು ತಳಿಯ ಅತಿ ಉಪಯುಕ್ತವಾದ ಎರಡು ವರ್ಷದಲ್ಲಿ ಫಲ ನೀಡುವ ಗಿಡಗಳನ್ನು ವಿತರಣೆ ಮಾಡಲಾಯಿತು. ಇದೆ ವೇಳೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮೀಣಾಭಿವೃದ್ಧಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂ ವೈ ಟಿ ಸ್ವಾಮಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಶಾಲೆಗಳಿಗೆ ಸಸ್ಯ ವಿತರಣೆ ಮಾಡಿರುವುದು ಸಾಗರಿಯ ಶಾಲಾ ಆವರಣದಲ್ಲಿ ಪ್ರಾಣಿ ಪಕ್ಷಿಗಳು ತಮ್ಮ ಆಹಾರಕ್ಕಾಗಿ ಹಾಗೂ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ನಮ್ಮ ಶಾಲಾ ಆವರಣದಲ್ಲಿ ಸಸಿಗಳನ್ನು ನಾಟಿ ಮಾಡಲಾಗಿದೆ ಎಂದರು.


ಇದೇ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ, ಕೃಷಿ ಅಧಿಕಾರಿ ಚಂದ್ರಶೇಖರ್, ಸೇರಿದಂತೆ ಶಾಲೆಯ ಶಿಕ್ಷಕ- ಶಿಕ್ಷಕಿಯರು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಇದ್ದರು
About The Author
Discover more from JANADHWANI NEWS
Subscribe to get the latest posts sent to your email.