ಚಳ್ಳಕೆರೆ ಅ25 ಹಾಲೂ ಒಕ್ಕೂಕದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ನಿಗಧಿತ ಅವಧಿಯೊಳಗೆ ಗುಣ ಮಟ್ಟದ ಕಟ್ಟಡ ಕಾಮಗಾರಿಯನ್ನು ನಿರ್ಮಾಣ ಮಾಡುವಂತೆ ಶಿವಮೊಗ್ಗ ಹಾಲೂ ಒಕ್ಕೂಟದ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ತಿಳಿಸಿದರು.
ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದ ಹಾಲು ಒಕ್ಕೂಟದ ಸ್ಚಂತ ಕಟ್ಟಡ ನಿರ್ಮಾಣಕ್ಕೆ .1.50 ಲಕ್ಷ ರೂ ಚೆಕ್ ವಿತರಿಸಿ ಮಾತನಾಡಿದರು.
ಕಟ್ಟಡ ಕಾಮಗಾರಿ ನಿರ್ಮಾಣದ ಮೊದಲ ಕಂತಿನ ಹಣ ನೀಡಲಾಗಿದ್ದು ಕಟ್ಟದ ಕಾಮಗಾರಿ ಪೂರ್ಣಗೊಂಡ ನಂತರ ಉಳಿದ ಹಣ ಚೆಕ್ ರೂಪದಲ್ಲಿ ಕೊಡಲಾಗುವುದು ಈ ಹಣದಲ್ಲಿ ಸುಸಜ್ಜಿತ ಬಿಎಂಸಿ ಸ್ವಂತ ಕಟ್ಟಡ ನಿರ್ಮಾಣ ಮಾಡಿ ಹಾಲಿನ ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಒಕ್ಕೂಟದ ಅಭಿವೃದ್ಧಿಗೆ ಮುಂದಾಗುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕಾರಿ ಮಂಡಳಿ ಸದಸ್ಯರು ಸಿಬ್ಬಂದಿಗಳು.ಮಾರ್ಗ ವಿಸ್ತರಣಾಧಿಕಾರಿಗಳು ಉಪಸ್ಥಿತರಿದ್ದರು.

About The Author
Discover more from JANADHWANI NEWS
Subscribe to get the latest posts sent to your email.