December 14, 2025
IMG-20241025-WA0036.jpg

ಚಳ್ಳಕೆರೆ ಅ.24 ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು ಸದುಪಯೋಗ ಪಡಿಸಿಕೊಳ್ಳುವಂತೆ ಪ್ರದಾನ ಸಿವಿಲ್ ನ್ಯಾಯಾದೀಶೆ ಜೆಎಂಎಫ್ ಸಿ ಹೇಮ ಹೆಚ್.ಆರ್ ಕಿವಿಮಾತು ಹೇಳಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಪ್ರಾದಿಕಾರ .ಕಾರ್ಮಿಕ ಇಲಾಖೆ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಕಾರ್ಯಗಾರ ಹಾಗೂ ಎಲೆಕ್ಟ್ರಾನಿಕ್ ಕಾರ್ಮಿಕರಿಗೆ ಕಿಟ್ ವಿತರಿಸಿ ಮಾತನಾಡಿದರು.
ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ ದೊಡ್ಡದಿದ್ದು, ಈ ನಿಟ್ಟಿನಲ್ಲಿ ವೆಲ್ಡಿಂಗ್ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಸರ್ಕಾರ ಇಂತಹ ಸವಲತ್ತುಗಳನ್ನು ಕಾರ್ಮಿಕರಿಗೆ ಉಚಿತವಾಗಿ ಒದಗಿಸುತ್ತಿದ್ದು ಇಂತಹ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡೆದುಕೊಳ್ಳುವ ಮೂಲಕ ತಮ್ಮ ವೃತ್ತಿಯಲ್ಲಿ ಮುಂದುವರಿಯಬೇಕೆಂದು ತಿಳಿಸಿದರು.
ಕಾರ್ಮಿಕ‌ರ ಸಂಘಟನೆಯ ಮುಖಂಡ ಸಿ.ವೈ.ಶಿವರುದ್ರಪ್ಪ ಮಾತನಾಡಿ
ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ‌ ಅನೇಕ‌ ಸೌಲಭ್ಯಗಳಿವೆ ಅವುಗಳನ್ನು ತಲುಪಿಸಲು ಅಧಿಕಾರಿ ಸಿಬ್ಬಂದಿಗಳ ಕೊರತೆ ಉದೆ ಎರಡು ಜಿಲ್ಲೆಗೆ ಒಬ್ಬ ಜಿಲ್ಲಾಮಟ್ಟ ಅಧಿಕಾರಿ ತಾಲೂಕು ಮಟ್ಟದಲ್ಲೂ ಎರಡು ತಾಲೂಕಿಗೊಬ್ಬರು ಅಧಿಕಾರಿಗಳ ಕಚೇರಿಗಳಲ್ಲೂ ಸಹ ಸಿಬ್ಬಂದಿಗಳ ಕೊರತೆಯಿಂದ ಸೌಲಭ್ಯಗಳನ್ನು ತಲುಪಿಸಲು ವಿಳಂಬ ವಾಗುತ್ತಿದೆ ಸರಕಾರ ಗಂಭೀರವಾಗಿ ಪರಿಗಣಿಸಿ ಕಾರ್ಮಿಕ ಇಲಾಖೆಗೆ ಅಧಿಕಾರಿ ಸಿಬ್ಬಂದಿಗಳನ್ನು ನೇಮಕ ಮಾಡುವ ಮೂಲಕ ಕಾರ್ಮಿಕ ಇಕಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸ ಬೇಕು ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ನಾಗರಾಜ್. ಶಿರಸ್ತೆದಾರ್ ಸದಾಶಿವಪ್ಪ. ಕಾರ್ಮಿಕ ನಿರೀಕ್ಷಕಿ ಕುಸುಮ ಮಾತನಾಡಿರು. ವಕೀಲರ ಸಂಘದ ಉಪಾಧ್ಯಕ್ಷ ಪಾಲಯ್ಯ‌.ಎಂ.ಸಿದ್ದರಾಜು ಇತರರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading