September 15, 2025
IMG-20241125-WA0187.jpg

ಚಳ್ಳಕೆರೆ: ನಗರದ ಎಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನವೆಂಬರ್ 29 ಮತ್ತು30ರಂದು ವಾಲ್ಮೀಕಿ ಅಧ್ಯಯನ ಪೀಠ ಕನ್ನಡ ವಿಶ್ವವಿದ್ಯಾನಿಲಯ ಹಾಗೂ ಎಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಾಯಕ ಅರಸರು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಬಿಎಸ್ ಮಂಜುನಾಥ್ ತಿಳಿಸಿದರು.

ನಗರದ ಕಾಲೇಜು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಚಿತ್ರದುರ್ಗ ನಾಯಕ ಅರಸರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಯುವ ಜನತೆಗೆ ತಿಳಿಸುವ ಸಲುವಾಗಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನವೆಂಬರ್ 29ರಂದು ಕಾರ್ಯಕ್ರಮವನ್ನು ಶಾಸಕ ಟಿ ರಘುಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾಕ್ಟರ್ ಡಿವಿ ಪರಮಶಿವಮೂರ್ತಿ ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ಡಾ. ಎನ್ ಸದಾಶಿವ ರೆಡ್ಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿ ಟಿ ವೀರಭದ್ರ ಸ್ವಾಮಿ ಜಾನಪದ ಮತ್ತು ರಂಗಭೂಮಿ ತಜ್ಞ ಪಿ ತಿಪ್ಪೇಸ್ವಾಮಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೊದಲ ದಿನ ಒಟ್ಟು ನಾಲ್ಕು ಘೋಷ್ಠಿಗಳು ನಡೆಯಲಿದ್ದು ಗೋಷ್ಠಿಯ ಇತಿಹಾಸ, ವಿಶೇಷ ವ್ಯಕ್ತಿಗಳು, ಸಂಶೋಧನಾ ಪ್ರಬಂಧಗಳ ಮಂಡನೆ, ಹಾಗೂ ಸಂಸ್ಕೃತಿ ಎಂಬ ಗೋಷ್ಠಿಗಳು ಜರುಗಲಿವೆ. ನವಂಬರ್ ಮೂವತ್ತರಂದು ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ವಿಶ್ವವಿದ್ಯಾಲಯದ ಕುಲ ಸಚಿವರಾದ ಡಾ. ವಿಜಯ್ ಪೂಣಚ್ಚ ತಂಬಂಡ ವಹಿಸಲಿದ್ದು ಸಮಾರೋಪದ ನುಡಿಯನ್ನು ವಾಲ್ಮೀಕಿ ಸಾಹಿತ್ಯ ಸಂಪದ ಸಮಿತಿ ಸದಸ್ಯರಾದ ಅರ್ತಿಕೋಟೆ ವೀರೇಂದ್ರ ಸಿಂಹ ನಡೆಸಿಕೊಡಲಿದ್ದಾರೆ ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪ್ರಾಧ್ಯಾಪಕ ಡಾಕ್ಟರ್ ಅರ್ಜುನ ಯು ಪಂಗಣ್ಣ ಸಾಹಿತಿ ತಿಪ್ಪಣ್ಣ ಮರಿಕುಂಟೆ ವಾಲ್ಮೀಕಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸೂರ ನಾಯಕ ಡಿವ ತಿಪ್ಪೇಸ್ವಾಮಿ ಬಿ ಎಸ್ ಮಂಜುನಾಥ್ ಉಪಸ್ಥಿತರಿರುವರು ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಗಣ್ಯರು ಹಾಗೂ ಸಾರ್ವಜನಿಕರು ವಿದ್ಯಾರ್ಥಿಗಳು ಚಿಂತಕರು ಆಗಮಿಸಲಿದ್ದು ಕಾರ್ಯಕ್ರಮ ಯಶಸ್ವಿಗೆ ಎಲ್ಲ ರೀತಿಯಿಂದಲೂ ಸನ್ನದ್ಧರಾಗಿದ್ದೇವೆ ಎಂದರು ಎರಡು ದಿನಗಳ ಕಾರ್ಯಕ್ರಮಕ್ಕೆ ಬರುವ ಮುಖ್ಯ ಅತಿಥಿಗಳಿಗೆ ಉಳಿದುಕೊಳ್ಳಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲಿದ್ದು ವಿಚಾರ ಗೋಷ್ಠಿಗಳಲ್ಲಿ ಪ್ರಬಂಧ ಮಂಡನೆಗೆ ಭಾಗವಹಿಸುವ ಇಚ್ಛೆವುಳ್ಳ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಹೆಸರುಗಳನ್ನು ಕಾಲೇಜಿನ ಸಮಯದಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಲು ಅವಕಾಶವಿದ್ದು ಆನ್ಲೈನ್ ಮುಖಾಂತರವೂ ನೋಂದಾಯಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗ ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading