January 30, 2026
1737968101906.jpg


ಚಿತ್ರದುರ್ಗಜ.27:
ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಚಿತ್ರದುರ್ಗ ಲೋಕೋಪಯೋಗಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಎ.ಹಸೇನ್ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ದರ್ಜೆ ಸಹಾಯಕ ಆರ್.ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಅಧಿಕಾರಿ, ನೌಕರರ ಸಭೆಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಶ್ರೀನಿವಾಸ್ಗ, ಖಜಾಂಚಿ ಎಸ್.ವಿ.ಶ್ರೀನಿವಾಸ್, ಉಪಾಧ್ಯಕ್ಷರಾದ ಸಿ.ಎಸ್.ಸುಮಾ ಹಾಗೂ ಲೋಕೋಪಯೋಗಿ ಇಲಾಖೆ ಚಿತ್ರದುರ್ಗ ವಿಭಾಗ ಮತ್ತು ಉಪವಿಭಾಗಗಳ ವ್ಯಾಪ್ತಿಯ ಅಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading