
ಹೊಸದುರ್ಗ: ತನ್ನ ಹೆಂಡತಿ ತವರು ಮನೆಗೆ ಹೋಗಿದ್ದಾಳೆ ಎಂಬ ಕಾರಣದಿಂದ ವಿವಾಹಿತ ಯುವಕನೋರ್ವ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಜರುಗಿದೆ.
ಮೃತ ಯುವಕನನ್ನು ತಾಲೂಕಿನ ಕ್ಯಾದಿಗೆರೆ ಗ್ರಾಮದ ರಾಮಪ್ಪ ಎಂಬುವವರ ಪುತ್ರ ರಂಗಸ್ವಾಮಿ (30) ಎಂದು ತಿಳಿದು ಬಂದಿದ್ದು ಈತ ತನ್ನ ಹೆಂಡತಿ ತವರು ಮನೆಗೆ ಹೋಗಿದ್ದಾಳೆ ಎಂಬ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.24ರಂದು ಸೋಮವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂದೆ ವಿಷ ಸೇವನೆ ಮಾಡದ್ದ ಅವನನ್ನು ಕೂಡಲೆ ಹೊಸದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ.27 ರಂದು ಗುರುವಾರ ಮದ್ಯಾಹ್ನ ಸಾವನ್ನಪ್ಪಿದ್ದಾನೆ ಈ ಬಗ್ಗೆ ಹೊಸದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.