
ಚಳ್ಳಕೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ರುದ್ರಭೂಮಿಯ ಅಕ್ರಮ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ತಹಸೀಲ್ದಾರ್ ರವರಿಗೆ ಬಿಜೆಪಿ ಮುಖಂಡ ಓಬಯ್ಯ ಬಿ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಅವರು ನಾಯಕನಹಟ್ಟಿ ಹೋಬಳಿ ತಿಮ್ಮಪ್ಪನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಮಸಾಗರ ಗ್ರಾಮದ ರಿ.ಸ. ನಂ- 12 ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ರುದ್ರಭೂಮಿಗೆ ಸರ್ಕಾರ 5 ಎಕರೆ ಜಾಗವನ್ನು ಮೀಸಲಿಟ್ಟಿದ್ದು, ಅನ್ಯ ಗಣ್ಯ ವ್ಯಕ್ತಿಗಳು ಈ ರುದ್ರಭೂಮಿಯ ಜಾಗವನ್ನು ಒತ್ತುವರಿ ಮಾಡಿದ್ದು, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿದರು.
About The Author
Discover more from JANADHWANI NEWS
Subscribe to get the latest posts sent to your email.