
ಹಿರಿಯೂರು :
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರೈತರ ಏಕೈಕ ಜೀವನಾಡಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟವು ಗುರುವಾರ 128.65 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಪ್ರತಿದಿನ 577ಕ್ಯೂಸೆಕ್ ನೀರಿನ ಒಳ ಹರಿವು ಹರಿದು ಬರುತ್ತಿದೆ.
ತರೀಕೆರೆ ಸಮೀಪದ ಬೆಟ್ಟದತಾವರೆಕೆರೆ ಸಮೀಪ ಇರುವ ಪಂಪ್ ಹೌಸ್ ನಿಂದ ಪ್ರತಿನಿತ್ಯ ಒಂದು ಪಂಪ್ ರನ್ ಮಾಡಿ ವಾಣಿವಿಲಾಸ ಸಾಗರಜಲಾಶಯಕ್ಕೆ ನೀರು ಹರಿಸಲಾಗುತ್ತಿರುವುದರಿಂದ ಸುಮಾರು 462 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎನ್ನಲಾಗಿದೆ.
ಇನ್ನು ವಾಣಿವಿಲಾಸಸಾಗರ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, ಜಲಾಶಯ 130 ಅಡಿಗೆ ಕೋಡಿ ಹರಿಯಲಿದೆ. ಇದೀಗ ಜಲಾಶಯದಲ್ಲಿ 30ಟಿ.ಎಂ.ಸಿ. ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯವನ್ನು ಹೊಂದಿದ್ದು, ವಾಣಿವಿಲಾಸ ಸಾಗರ ಜಲಾಶಯ ತುಂಬಿ ಕೋಡಿ ಬೀಳುವ ಸುದ್ದಿ ಕೇಳಲು ತಾಲ್ಲೂಕಿನ ರೈತರು ಕುತೂಹಲದಿಂದ ಕಾಯುತ್ತಿದ್ದಾರೆ .
About The Author
Discover more from JANADHWANI NEWS
Subscribe to get the latest posts sent to your email.