January 29, 2026
IMG-20241228-WA0257.jpg

ನಾಯಕನಹಟ್ಟಿ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆರೋಗ್ಯ ಇಲಾಖೆಯಿಂದ ಅಗೌರವ ಸಲ್ಲಿಸಲಾಗಿದೆ ಎಂದು ಕರವೇ ಪ್ರವೀಣ್ ಶೆಟ್ಟಿ ಬಣ ಹೋಬಳಿ ಅಧ್ಯಕ್ಷ ಪ್ರಕಾಶ್ ಆರೋಪಿಸಿದರು.

ನಂತರ ಮಾತನಾಡಿದ ಅವರು ರಾಷ್ಟ್ರದ ನಾಯಕರು ನಿಧನದ ನಂತರ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಆರಿಸುವ ಮೂಲಕ ಗೌರವ ಸಲ್ಲಿಸಲು ಸರ್ಕಾರದ ಆದೇಶ ಇರುತ್ತದೆ. ಆದರೆ ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಧ್ವಜವನ್ನು ಆರಿಸದೆ, ಸಂತಾಪವನ್ನು ಸೂಚಿಸದೆ, ಸರ್ಕಾರದ ಆದೇಶವನ್ನು ಪಾಲಿಸದೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರಿಗೆ ಅಗೌರವ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಆದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಪ್ರಧಾನ ಕಾರ್ಯದರ್ಶಿ ಸುರೇಶ್, ಸಂಘಟನಾ ಕಾರ್ಯದರ್ಶಿ ಓಬಯ್ಯ, ಕಾರ್ಮಿಕ ಘಟಕ ಅಧ್ಯಕ್ಷ ಓಂಕಾರಪ್ಪ, ಮನೋಜ್ ಕುಮಾರ್ ಇನ್ನು ಮುಂತಾದವರು ಹಾಜರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading